ಗುರುವಾರ ದೆಹಲಿಯ ಮಾಡೆಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರಾಹುಲ್ ಹಾಗೂ ಆತನ ಸಹೋದರ ಹರೀಶ್, ಸೋನುವಿನ ಹೊಟ್ಟೆಗೆ ಹಲವು ಬಾರಿ ಚಾಕುವಿನಿಂದ ಇರಿಯುವ ಮೂಲಕ ಹತ್ಯೆಗೈದಿದ್ದಾರೆ. ಸೋನು ಹಾಗೂ ರಾಹುಲ್ ಒಟ್ಟಿಗೆ ಅಡುಗೆ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಸೋನು ಮೂವತ್ತು ರೂಪಾಯಿ ಪಡೆದುಕೊಂಡಿದ್ದಾನೆ. ಆದರೆ ಎಷ್ಟು ದಿನಗಳಾದರೂ ಸಾಲ ಹಿಂದಿರುಗಿಸದ ಕಾರಣ ಇವರಿಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ.
ಗುರುವಾರದಂದು ತನ್ನ ಸಹೋದರ ಹರೀಶ್ ನನ್ನ ಕರೆದುಕೊಂಡು ರಾಹುಲ್, ಸೋನು ಬಳಿಗೆ ಬಂದಿದ್ದು, ಮೂವರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಇದು ವಿಕೋಪಕ್ಕೆ ತೆರಳಿದ ಬಳಿಕ ಸಹೋದರರು ಸೋನುವಿಗೆ ಚಾಕುವಿನಿಂದ ಇರಿದಿದ್ದಾರೆ. ಗಲಾಟೆ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದ ಸೋನುನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾನೆ. ಇದೀಗ ಸಹೋದರರನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…