ಇದೇ ತಿಂಗಳ 14ನೇ ತಾರೀಕಿನಂದು ಸ್ನೇಹಿತರ ಮಧ್ಯೆ ಐಫೋನ್ ವಿಚಾರಕ್ಕಾಗಿ ಜಗಳ ವಾಗಿದ್ದು ಮೈಸೂರು ನಗರದ ತಾವರೆಕಟ್ಟೆಯ ಬಳಿ ತಾವರೆಕೆರೆಯ ಪಕ್ಕದ ಖಾಲಿ ಜಾಗದಲ್ಲಿ ನಿತಿನ್ ಎಂಬ ಯುವಕನನ್ನು ಆತನ ಸ್ನೇಹಿತರೆ ಕೊಲೆ ಮಾಡಿರುವಂತಹ ಘಟನೆ ನಡೆದಿರುತ್ತದೆ. 14ನೇ ತಾರೀಕು ನಿತಿನ್ ಹಾಗೂ ಆತನ ಇಬ್ಬರು ಸ್ನೇಹಿತರು ಮದ್ಯಾ ಸೇವಿಸಿದ್ದು ನಂತರ ಇವರುಗಳ ಮಧ್ಯೆ ಐಫೋನ್ ವಿಚಾರಕ್ಕಾಗಿ ಗಲಾಟೆ ಆರಂಭವಾಗಿದ್ದು, ಇಬ್ಬರು ಸ್ನೇಹಿತರು ನಿತಿನನ್ನು ತಾವರೆಕೆರೆಯ ಪಕ್ಕದಲ್ಲಿರುವ ಕಾಲಿ ಜಾಗಕ್ಕೆ ಕರೆತಂದು ಅವನ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿರುತ್ತಾರೆ.
ಈ ವಿಚಾರವಾಗಿ ನಜರಾಬಾದ್ ಪೊಲೀಸರು 15ನೇ ತಾರೀಖಿನಂದು ನಿತಿನ್ನ ಇಬ್ಬರು ಸ್ನೇಹಿತರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಅವರುಗಳೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಐಫೋನ್ ವಿಚಾರಕ್ಕಾಗಿ ನಡೆದ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಘಟನೆ ನಡೆದ ಒಂದೇ ದಿನಕ್ಕೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಿರುವ ನಜರಾಬಾದ್ ಪೊಲೀಸರನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಸಿರುತ್ತಾರೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…