ಇದೇ ತಿಂಗಳ 14ನೇ ತಾರೀಕಿನಂದು ಸ್ನೇಹಿತರ ಮಧ್ಯೆ ಐಫೋನ್ ವಿಚಾರಕ್ಕಾಗಿ ಜಗಳ ವಾಗಿದ್ದು ಮೈಸೂರು ನಗರದ ತಾವರೆಕಟ್ಟೆಯ ಬಳಿ ತಾವರೆಕೆರೆಯ ಪಕ್ಕದ ಖಾಲಿ ಜಾಗದಲ್ಲಿ ನಿತಿನ್ ಎಂಬ ಯುವಕನನ್ನು ಆತನ ಸ್ನೇಹಿತರೆ ಕೊಲೆ ಮಾಡಿರುವಂತಹ ಘಟನೆ ನಡೆದಿರುತ್ತದೆ. 14ನೇ ತಾರೀಕು ನಿತಿನ್ ಹಾಗೂ ಆತನ ಇಬ್ಬರು ಸ್ನೇಹಿತರು ಮದ್ಯಾ ಸೇವಿಸಿದ್ದು ನಂತರ ಇವರುಗಳ ಮಧ್ಯೆ ಐಫೋನ್ ವಿಚಾರಕ್ಕಾಗಿ ಗಲಾಟೆ ಆರಂಭವಾಗಿದ್ದು, ಇಬ್ಬರು ಸ್ನೇಹಿತರು ನಿತಿನನ್ನು ತಾವರೆಕೆರೆಯ ಪಕ್ಕದಲ್ಲಿರುವ ಕಾಲಿ ಜಾಗಕ್ಕೆ ಕರೆತಂದು ಅವನ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿರುತ್ತಾರೆ.
ಈ ವಿಚಾರವಾಗಿ ನಜರಾಬಾದ್ ಪೊಲೀಸರು 15ನೇ ತಾರೀಖಿನಂದು ನಿತಿನ್ನ ಇಬ್ಬರು ಸ್ನೇಹಿತರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಅವರುಗಳೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಐಫೋನ್ ವಿಚಾರಕ್ಕಾಗಿ ನಡೆದ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಘಟನೆ ನಡೆದ ಒಂದೇ ದಿನಕ್ಕೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಿರುವ ನಜರಾಬಾದ್ ಪೊಲೀಸರನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಸಿರುತ್ತಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…