ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಪಿಎಂಸಿ ಯಾರ್ಡ್ನಲ್ಲಿ ನಡೆದಿದೆ. ಮೃತನನ್ನು 30 ವರ್ಷದ ಓಂಕಾರ ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನು ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. 20/11/2022ರ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಎಪಿಎಂಸಿ ಯಾರ್ಡ್ಗೆ ಕರೆದುಕೊಂಡು ಬಂದಿದ್ದು, ಎಲ್ಲರೂ ಯಾರ್ಡ್ನಲ್ಲಿ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಹಣದ ವಿಚಾರಕ್ಕೆ ಸಂಬಧಿಸಿ ಗೆಳೆಯ ಓಂಕಾರನನ್ನೇ ಉಳಿದ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣ ತರೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ಮೂಡಿಸುವ ಘಟನೆ ಬೆಳಕಿಗೆ ಬಂದಿದ್ದು, ಆಡುಗೋಡಿ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು…
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…