ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಯುವಕ ರಾಹುಲ್, ಕಳೆದ ಜನವರಿ 30ರಿಂದ ಕಾಣೆಯಾಗಿದ್ದು, ಆತನ ಶವ ಮಹಾರಾಷ್ಟ್ರದ ಸಾಂಗ್ಲೆ ಬಳಿಯ ಬೆಣ್ಣೆತೋರಾ ಹಿನ್ನೀರಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆ ಮಾಡಿಸಿದ ಬಳಿಕ ಶವವನ್ನು ಕಲ್ಲು ಕಟ್ಟಿ ನೀರಿನಲ್ಲಿ ಬಿಸಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಪ್ರಕರಣದ ಬೆನ್ನುಹತ್ತಿದ ಪೊಲೀಸರು
ಕಾಣೆಯಾಗಿದ್ದ ರಾಹುಲ್ಗಾಗಿ ಕುಟುಂಬಸ್ಥರು ನಿರಂತರ ಹುಡುಕಾಟ ನಡೆಸಿದರೂ ಆತನ ಸುಳಿವು ಸಿಗದೆ ನಿಗಾಧಿಯಾಯಿತು. ಈ ನಡುವೆ ಮಹಾರಾಷ್ಟ್ರದ ಸಾಂಗ್ಲೆ ಹಿನ್ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದರು. ಕಾರ್ಯಚರಣೆಯಲ್ಲಿ ಆಳಂದ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಐವರನ್ನು ಗುರುತಿಸಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪವನ್ ಹಾಗೂ ಓರ್ವ ಅಪ್ರಾಪ್ತ ಬಾಲಕನಿದ್ದಾರೆ.
ಮುಖ್ಯ ಆರೋಪಿ ಕುಂಭಮೇಳಕ್ಕೆ ಪರಾರಿಯಾದ ಶಂಕೆ
ಪೊಲೀಸರ ವಿಚಾರಣೆಯಲ್ಲಿ ಪ್ರಮುಖ ಆರೋಪಿ ಕುಂಭಮೇಳಕ್ಕೆ ತೆರಳಿರುವ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಯ ಹಿಂದಿನ ಕಾರಣವಾಗಿ ಯುವತಿಯ ವಿಚಾರ ಉಲ್ಲೇಖಗೊಂಡಿದ್ದು, ಇದನ್ನು ದೃಢಪಡಿಸುವ ದಿಕ್ಕಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನ್ಯಾಯಕ್ಕಾಗಿ ಕುಟುಂಬದ ಅಶೋತ್ತರ
ರಾಹುಲ್ ಅವರ ಕುಟುಂಬಸ್ಥರು ಆತನ ಹತ್ಯೆ ಪಿತೂರಿಯಂತೆ ನಡೆದಿದೆ ಎಂದು ಆರೋಪಿಸಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…