ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಯುವಕ ರಾಹುಲ್, ಕಳೆದ ಜನವರಿ 30ರಿಂದ ಕಾಣೆಯಾಗಿದ್ದು, ಆತನ ಶವ ಮಹಾರಾಷ್ಟ್ರದ ಸಾಂಗ್ಲೆ ಬಳಿಯ ಬೆಣ್ಣೆತೋರಾ ಹಿನ್ನೀರಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆ ಮಾಡಿಸಿದ ಬಳಿಕ ಶವವನ್ನು ಕಲ್ಲು ಕಟ್ಟಿ ನೀರಿನಲ್ಲಿ ಬಿಸಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಪ್ರಕರಣದ ಬೆನ್ನುಹತ್ತಿದ ಪೊಲೀಸರು
ಕಾಣೆಯಾಗಿದ್ದ ರಾಹುಲ್ಗಾಗಿ ಕುಟುಂಬಸ್ಥರು ನಿರಂತರ ಹುಡುಕಾಟ ನಡೆಸಿದರೂ ಆತನ ಸುಳಿವು ಸಿಗದೆ ನಿಗಾಧಿಯಾಯಿತು. ಈ ನಡುವೆ ಮಹಾರಾಷ್ಟ್ರದ ಸಾಂಗ್ಲೆ ಹಿನ್ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದರು. ಕಾರ್ಯಚರಣೆಯಲ್ಲಿ ಆಳಂದ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಐವರನ್ನು ಗುರುತಿಸಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪವನ್ ಹಾಗೂ ಓರ್ವ ಅಪ್ರಾಪ್ತ ಬಾಲಕನಿದ್ದಾರೆ.
ಮುಖ್ಯ ಆರೋಪಿ ಕುಂಭಮೇಳಕ್ಕೆ ಪರಾರಿಯಾದ ಶಂಕೆ
ಪೊಲೀಸರ ವಿಚಾರಣೆಯಲ್ಲಿ ಪ್ರಮುಖ ಆರೋಪಿ ಕುಂಭಮೇಳಕ್ಕೆ ತೆರಳಿರುವ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಯ ಹಿಂದಿನ ಕಾರಣವಾಗಿ ಯುವತಿಯ ವಿಚಾರ ಉಲ್ಲೇಖಗೊಂಡಿದ್ದು, ಇದನ್ನು ದೃಢಪಡಿಸುವ ದಿಕ್ಕಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನ್ಯಾಯಕ್ಕಾಗಿ ಕುಟುಂಬದ ಅಶೋತ್ತರ
ರಾಹುಲ್ ಅವರ ಕುಟುಂಬಸ್ಥರು ಆತನ ಹತ್ಯೆ ಪಿತೂರಿಯಂತೆ ನಡೆದಿದೆ ಎಂದು ಆರೋಪಿಸಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…