ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಯುವಕ ರಾಹುಲ್, ಕಳೆದ ಜನವರಿ 30ರಿಂದ ಕಾಣೆಯಾಗಿದ್ದು, ಆತನ ಶವ ಮಹಾರಾಷ್ಟ್ರದ ಸಾಂಗ್ಲೆ ಬಳಿಯ ಬೆಣ್ಣೆತೋರಾ ಹಿನ್ನೀರಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆ ಮಾಡಿಸಿದ ಬಳಿಕ ಶವವನ್ನು ಕಲ್ಲು ಕಟ್ಟಿ ನೀರಿನಲ್ಲಿ ಬಿಸಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಪ್ರಕರಣದ ಬೆನ್ನುಹತ್ತಿದ ಪೊಲೀಸರು
ಕಾಣೆಯಾಗಿದ್ದ ರಾಹುಲ್ಗಾಗಿ ಕುಟುಂಬಸ್ಥರು ನಿರಂತರ ಹುಡುಕಾಟ ನಡೆಸಿದರೂ ಆತನ ಸುಳಿವು ಸಿಗದೆ ನಿಗಾಧಿಯಾಯಿತು. ಈ ನಡುವೆ ಮಹಾರಾಷ್ಟ್ರದ ಸಾಂಗ್ಲೆ ಹಿನ್ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದರು. ಕಾರ್ಯಚರಣೆಯಲ್ಲಿ ಆಳಂದ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಐವರನ್ನು ಗುರುತಿಸಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪವನ್ ಹಾಗೂ ಓರ್ವ ಅಪ್ರಾಪ್ತ ಬಾಲಕನಿದ್ದಾರೆ.
ಮುಖ್ಯ ಆರೋಪಿ ಕುಂಭಮೇಳಕ್ಕೆ ಪರಾರಿಯಾದ ಶಂಕೆ
ಪೊಲೀಸರ ವಿಚಾರಣೆಯಲ್ಲಿ ಪ್ರಮುಖ ಆರೋಪಿ ಕುಂಭಮೇಳಕ್ಕೆ ತೆರಳಿರುವ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆಯ ಹಿಂದಿನ ಕಾರಣವಾಗಿ ಯುವತಿಯ ವಿಚಾರ ಉಲ್ಲೇಖಗೊಂಡಿದ್ದು, ಇದನ್ನು ದೃಢಪಡಿಸುವ ದಿಕ್ಕಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನ್ಯಾಯಕ್ಕಾಗಿ ಕುಟುಂಬದ ಅಶೋತ್ತರ
ರಾಹುಲ್ ಅವರ ಕುಟುಂಬಸ್ಥರು ಆತನ ಹತ್ಯೆ ಪಿತೂರಿಯಂತೆ ನಡೆದಿದೆ ಎಂದು ಆರೋಪಿಸಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…