Crime

ಹಳೆ ದ್ವೇಷದಿಂದ ರೌಡಿಶೀಟರ್ ಸುಪ್ರೀತ್ ನ ಬರ್ಬರ ಹತ್ಯೆ: ಪೊಲೀಸರ ತನಿಖೆ ಆರಂಭ

ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಬಳಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ರೌಡಿಶೀಟರ್ ಸುಪ್ರೀತ್ ಅಲಿಯಾಸ್ ಸುಪ್ಪಿ (31) ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೀಡಾಗಿದ್ದಾನೆ. ಈ ದುಷ್ಕೃತ್ಯ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಡೆದಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.
ಹತ್ಯೆಯ ವಿವರ:
ಸುಪ್ರೀತ್ ತನ್ನ ಜಮೀನಿನ ಕೊಟ್ಟಿಗೆಯಲ್ಲಿ ಸ್ನೇಹಿತರ ಜೊತೆ ಇದ್ದಾಗ, ಆತನ ಮೇಲೆ 6 ಮಂದಿ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ. ಮಚ್ಚು ಮತ್ತು ಲಾಂಗುಗಳಿಂದ ತಿವಿದ ಪರಿಣಾಮ, ತೀವ್ರ ಗಾಯಗೊಂಡು ಮೆದುಳು ಹೊರ ಬಿದ್ದಿದೆ. ತಲೆ ಮತ್ತು ಕತ್ತಿನ ಭಾಗಕ್ಕೆ ಬಿದ್ದ ಏಟುಗಳಿಂದ ಸುಪ್ರೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಕೃತ್ಯ ರಾತ್ರಿ 11 ಗಂಟೆಗೆ ನಡೆದಿದೆ.
ಇನ್ನೊಬ್ಬನಿಗೂ ಹಲ್ಲೆ:
ಸಹೋದರ ಸುಪ್ರೀತ್ ಜತೆಗಿದ್ದ ಅರ್ಜುನ್‌ಗೌಡ (23) ಎಂಬಾತನನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಥಳಿಸಲಾಗಿದೆ. ಗಾಯಗೊಂಡ ಅವನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಪ್ರೀತ್ ಜತೆ ಇದ್ದ ಮತ್ತಿಬ್ಬರು, ಕಾರ್ತಿಕ್ ಮತ್ತು ರುಷಿತ್, ಸ್ಥಳದಿಂದ ಪರಾರಿಯಾಗಿದ್ದಾರೆ.
ಹತ್ಯೆಯ ಹಿನ್ನೆಲೆ:
ಸುಪ್ರೀತ್ ಹಿಂದಿನ ದಿನಗಳಲ್ಲಿ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಇದು 2017ರಲ್ಲಿ ನಡೆದ ಕುಂಟ ವಿನೋದನ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೂಡ ಆಗಿದ್ದ. ಪ್ರಸ್ತುತ ಘಟನೆ ಗ್ರಾಮದಲ್ಲಿ ಹಳೆ ದ್ವೇಷದಿಂದಲೇ ನಡೆದಿರುವ ಸಾಧ್ಯತೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಪೊಲೀಸರು ಸ್ಥಳ ಪರಿಶೀಲನೆ:
ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್‌ಪಿ ತಿಮ್ಮಯ್ಯ, ಡಿವೈಎಸ್‌ಪಿ ಮುರಳಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಲಹಳ್ಳಿಯ ಪ್ರಮೋದ್, ಮನು, ಮೋಹನ್ ಸೇರಿ ಕೊಲೆಯ ಪ್ರಮುಖ ಆರೋಪಿಗಳ ತಂಡವನ್ನು ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ.
ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆ ನಡೆಸಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago