ಮಂಗಳೂರು ನಗರದಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್ ಯಾನೆ ಮೋನು ಅವರ ಅಂತಿಮ ಸಂಸ್ಕಾರ ಇಂದು ಬೆಳಗ್ಗೆ ಕಠಿಣ ಪೊಲೀಸ್ ಬಂದೋಬಸ್ತ್ ನಡುವೆಯೇ ನೆರವೇರಿತು.
ಮೃತದೇಹವನ್ನು ಮಂಗಳೂರಿನ ಕುತ್ತಾರ್ ಪ್ರದೇಶದಲ್ಲಿರುವ ಮದನಿ ನಗರ ಮಸೀದಿಗೆ ಕರೆತರಲಾಗಿದ್ದು, ಅಲ್ಲಿ ಮಯ್ಯತ್ ಸ್ನಾನ ನೆರವೇರಿಸಲಾಯಿತು. ಬಳಿಕ ಮಸೀದಿಯಲ್ಲಿಯೇ ಮಯ್ಯತ್ ನಮಾಝ್ ನೆರವೇರಿತು. ನಮಾಝ್ ಬಳಿಕ ಮೃತದೇಹವನ್ನು ಪೊಲೀಸ್ ಭದ್ರತೆಯೊಂದಿಗೆ ಕೊಳತ್ತಮಜಲಿಗೆ ಸಾಗಿಸಲಾಯಿತು.
ಕುತ್ತಾರ್, ತೊಕ್ಕೊಟ್ಟು, ಪಂಪ್ವೆಲ್, ಮಿತ್ತಬೈಲ್ ಮಾರ್ಗವಾಗಿ ಮೃತದೇಹವನ್ನು ಕೊಳತ್ತಮಜಲಿಯಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು. ಬಳಿಕ ಅಲ್ಲಿನ ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ಆವರಣದಲ್ಲಿ ದಫನ ವಿಧಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹಾಗೂ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಬಂದೋಬಸ್ತ್ ನಿರ್ವಹಿಸಿದರು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…