ಮಂಗಳೂರು ನಗರದಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹಿಮಾನ್ ಯಾನೆ ಮೋನು ಅವರ ಅಂತಿಮ ಸಂಸ್ಕಾರ ಇಂದು ಬೆಳಗ್ಗೆ ಕಠಿಣ ಪೊಲೀಸ್ ಬಂದೋಬಸ್ತ್ ನಡುವೆಯೇ ನೆರವೇರಿತು.
ಮೃತದೇಹವನ್ನು ಮಂಗಳೂರಿನ ಕುತ್ತಾರ್ ಪ್ರದೇಶದಲ್ಲಿರುವ ಮದನಿ ನಗರ ಮಸೀದಿಗೆ ಕರೆತರಲಾಗಿದ್ದು, ಅಲ್ಲಿ ಮಯ್ಯತ್ ಸ್ನಾನ ನೆರವೇರಿಸಲಾಯಿತು. ಬಳಿಕ ಮಸೀದಿಯಲ್ಲಿಯೇ ಮಯ್ಯತ್ ನಮಾಝ್ ನೆರವೇರಿತು. ನಮಾಝ್ ಬಳಿಕ ಮೃತದೇಹವನ್ನು ಪೊಲೀಸ್ ಭದ್ರತೆಯೊಂದಿಗೆ ಕೊಳತ್ತಮಜಲಿಗೆ ಸಾಗಿಸಲಾಯಿತು.
ಕುತ್ತಾರ್, ತೊಕ್ಕೊಟ್ಟು, ಪಂಪ್ವೆಲ್, ಮಿತ್ತಬೈಲ್ ಮಾರ್ಗವಾಗಿ ಮೃತದೇಹವನ್ನು ಕೊಳತ್ತಮಜಲಿಯಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು. ಬಳಿಕ ಅಲ್ಲಿನ ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ಆವರಣದಲ್ಲಿ ದಫನ ವಿಧಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹಾಗೂ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಬಂದೋಬಸ್ತ್ ನಿರ್ವಹಿಸಿದರು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…