ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಮುಸ್ಲಿಂ ಕಂಡಕ್ಟರ್ ತಲೆ ಮೇಲಿನ ಕ್ಯಾಪ್ ತೆಗೆಯುವಂತೆ ಮಹಿಳಾ ಪ್ರಯಾಣಿಕರೊಬ್ಬರು ಬಲವಂತವಾಗಿ ಒತ್ತಾಯಿಸಿದ ಪ್ರಕರಣ ನಡೆದಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಬೆಳವಣಗೆ ನಡುವೆಯೇ, ಘಟನೆಯ ಬಗೆಗಿನ ವೈರಲ್ ಟ್ವೀಟ್ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಅಪರಿಚಿತ ಮಹಿಳೆಯು ಒಂದೂವರೆ ನಿಮಿಷದ ಕ್ಲಿಪ್ ಶೂಟ್ ಮಾಡಿದ್ದಾರೆ. ಬಿಎಂಟಿಸಿ ಬಸ್ನಲ್ಲಿರುವ ಕಂಡಕ್ಟರ್ ಸಮವಸ್ತ್ರದಲ್ಲಿದ್ದಾರೆ. ಸಮವಸ್ತ್ರದಲ್ಲಿ ಇರುವವರು ಟೊಪ್ಪಿಯನ್ನು (ಮುಸ್ಲಿಮರು ತಲೆಗೆ ಹಾಕಿಕೊಳ್ಳುವ ಟೊಪ್ಪಿ) ಧರಿಸಬಹುದೇ ಎಂದು ಕಂಡಕ್ಟರ್ಗೆ ಮಹಿಳೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಡಕ್ಟರ್ ಬಹುಶಃ ಕ್ಯಾಪ್ ಅನ್ನು ಧರಿಸಬಹುದೆಂದು ಕಂಡಕ್ಟರ್ ಉತ್ತರಿಸಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ‘ನೀವು ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ. ಮಸೀದಿಯೊಳಗೆ ಟೊಪ್ಪಿಯನ್ನು ಹಾಕಿಕೊಳ್ಳಿ. ಸಮವಸ್ತ್ರದಲ್ಲಿರುವಾಗ ನೀವು ಟೊಪ್ಪಿಯನ್ನು ಧರಿಸಬಾರದು’ ಎಂದು ಮಹಿಳೆ ಹೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್, ‘ನಾನು ಅನೇಕ ವರ್ಷಗಳಿಂದ ಟೊಪ್ಪಿಯನ್ನು ಧರಿಸುತ್ತಿದ್ದೇನೆ ಮೇಡಮ್’ ಎಂದು ಹೇಳುತ್ತಾರೆ. ಸಮವಸ್ತ್ರ ತೊಟ್ಟಕೊಂಡಿರುವಾಗ ಇದನ್ನು ಧರಿಸಬಹುದೇ ಎಂದು ಮಹಿಳೆ ಕೇಳುತ್ತಾರೆ. ಕ್ಯಾಪ್ ಅನ್ನು ತೆಗೆಯುವಂತೆ ಮಹಿಳೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್ ಈ ವರೆಗೆ ಯಾರೂ ಆಕ್ಷೇಪಿಸಿಲ್ಲ. ಆ ಕಾರಣ ನಾನು ಕ್ಯಾಪ್ ಅನ್ನು ಧರಿಸುತ್ತಿದ್ದೇನೆ ಎಂದು ಕಂಡಕ್ಟರ್ ಹೇಳುತ್ತಾರೆ. ನಾನು ಈ ಬಗ್ಗೆ ನಮ್ಮ ಅಧಿಕಾರಿಗೆ ತಿಳಿಸುತ್ತೇನೆ. ಅವರು ಹೇಳಿದಂತೆ ಕೇಳುತ್ತೇನೆ ಎಂದು ಕಂಡಕ್ಟರ್ ಹೇಳುತ್ತಾರೆ.
ಕಂಡಕ್ಟರ್ ತನ್ನ ಹಸಿರು ಕ್ಯಾಪ್ ಅನ್ನು ತೆಗೆದುಹಾಕಬೇಕು ಎಂದು ಮಹಿಳೆ ಮತ್ತೆ ಒತ್ತಾಯಿಸುತ್ತಾರೆ. ‘ನೀವು ಅದನ್ನು ಮಸೀದಿ ಅಥವಾ ನಿಮ್ಮ ಮನೆಯಲ್ಲಿ ಧರಿಸಿದರೆ ಯಾರೂ ಆಕ್ಷೇಪಿಸುವುದಿಲ್ಲ. ಆದರೆ, ಕೆಲಸದಲ್ಲಿರುವು ಹಾಕಿಕೊಳ್ಳಬಾರದು. ಅದನ್ನು ತೆಗೆಯಿರಿ’ ಎಂದು ಮಹಿಳೆ ಒತ್ತಾಯಿಸುತ್ತಾರೆ. ಆ ನಂತರ ಕಂಡಕ್ಟರ್ ಕ್ಯಾಪ್ ಅನ್ನು ತಲೆಯ ಮೇಲಿಂದ ತೆಗೆಯುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…