Latest

ಮುಸ್ಲಿಂ ಕಂಡಕ್ಟರ್ ನ ಟೋಪಿ ತೆಗೆಸಿದ ಮಹಿಳೆ; ವೈರಲ್ ಆಯ್ತು ವಿಡಿಯೋ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಮುಸ್ಲಿಂ ಕಂಡಕ್ಟರ್‌ ತಲೆ ಮೇಲಿನ ಕ್ಯಾಪ್‌ ತೆಗೆಯುವಂತೆ ಮಹಿಳಾ ಪ್ರಯಾಣಿಕರೊಬ್ಬರು ಬಲವಂತವಾಗಿ ಒತ್ತಾಯಿಸಿದ ಪ್ರಕರಣ ನಡೆದಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.
ಈ ಬೆಳವಣಗೆ ನಡುವೆಯೇ, ಘಟನೆಯ ಬಗೆಗಿನ ವೈರಲ್ ಟ್ವೀಟ್‌ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಅಪರಿಚಿತ ಮಹಿಳೆಯು ಒಂದೂವರೆ ನಿಮಿಷದ ಕ್ಲಿಪ್ ಶೂಟ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿರುವ ಕಂಡಕ್ಟರ್‌ ಸಮವಸ್ತ್ರದಲ್ಲಿದ್ದಾರೆ. ಸಮವಸ್ತ್ರದಲ್ಲಿ ಇರುವವರು ಟೊಪ್ಪಿಯನ್ನು (ಮುಸ್ಲಿಮರು ತಲೆಗೆ ಹಾಕಿಕೊಳ್ಳುವ ಟೊಪ್ಪಿ) ಧರಿಸಬಹುದೇ ಎಂದು ಕಂಡಕ್ಟರ್‌ಗೆ ಮಹಿಳೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಡಕ್ಟರ್‌ ಬಹುಶಃ ಕ್ಯಾಪ್‌ ಅನ್ನು ಧರಿಸಬಹುದೆಂದು ಕಂಡಕ್ಟರ್ ಉತ್ತರಿಸಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ‘ನೀವು ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ. ಮಸೀದಿಯೊಳಗೆ ಟೊಪ್ಪಿಯನ್ನು ಹಾಕಿಕೊಳ್ಳಿ. ಸಮವಸ್ತ್ರದಲ್ಲಿರುವಾಗ ನೀವು ಟೊಪ್ಪಿಯನ್ನು ಧರಿಸಬಾರದು’ ಎಂದು ಮಹಿಳೆ ಹೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್, ‘ನಾನು ಅನೇಕ ವರ್ಷಗಳಿಂದ ಟೊಪ್ಪಿಯನ್ನು ಧರಿಸುತ್ತಿದ್ದೇನೆ ಮೇಡಮ್’ ಎಂದು ಹೇಳುತ್ತಾರೆ. ಸಮವಸ್ತ್ರ ತೊಟ್ಟಕೊಂಡಿರುವಾಗ ಇದನ್ನು ಧರಿಸಬಹುದೇ ಎಂದು ಮಹಿಳೆ ಕೇಳುತ್ತಾರೆ. ಕ್ಯಾಪ್‌ ಅನ್ನು ತೆಗೆಯುವಂತೆ ಮಹಿಳೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್‌ ಈ ವರೆಗೆ ಯಾರೂ ಆಕ್ಷೇಪಿಸಿಲ್ಲ. ಆ ಕಾರಣ ನಾನು ಕ್ಯಾಪ್‌ ಅನ್ನು ಧರಿಸುತ್ತಿದ್ದೇನೆ ಎಂದು ಕಂಡಕ್ಟರ್‌ ಹೇಳುತ್ತಾರೆ. ನಾನು ಈ ಬಗ್ಗೆ ನಮ್ಮ ಅಧಿಕಾರಿಗೆ ತಿಳಿಸುತ್ತೇನೆ. ಅವರು ಹೇಳಿದಂತೆ ಕೇಳುತ್ತೇನೆ ಎಂದು ಕಂಡಕ್ಟರ್‌ ಹೇಳುತ್ತಾರೆ.
ಕಂಡಕ್ಟರ್ ತನ್ನ ಹಸಿರು ಕ್ಯಾಪ್ ಅನ್ನು ತೆಗೆದುಹಾಕಬೇಕು ಎಂದು ಮಹಿಳೆ ಮತ್ತೆ ಒತ್ತಾಯಿಸುತ್ತಾರೆ. ‘ನೀವು ಅದನ್ನು ಮಸೀದಿ ಅಥವಾ ನಿಮ್ಮ ಮನೆಯಲ್ಲಿ ಧರಿಸಿದರೆ ಯಾರೂ ಆಕ್ಷೇಪಿಸುವುದಿಲ್ಲ. ಆದರೆ, ಕೆಲಸದಲ್ಲಿರುವು ಹಾಕಿಕೊಳ್ಳಬಾರದು. ಅದನ್ನು ತೆಗೆಯಿರಿ’ ಎಂದು ಮಹಿಳೆ ಒತ್ತಾಯಿಸುತ್ತಾರೆ. ಆ ನಂತರ ಕಂಡಕ್ಟರ್ ಕ್ಯಾಪ್ ಅನ್ನು ತಲೆಯ ಮೇಲಿಂದ ತೆಗೆಯುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

8 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

9 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

9 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

14 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

14 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

14 hours ago