Latest

ಮುಸ್ಲಿಂ ಕಂಡಕ್ಟರ್ ನ ಟೋಪಿ ತೆಗೆಸಿದ ಮಹಿಳೆ; ವೈರಲ್ ಆಯ್ತು ವಿಡಿಯೋ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಮುಸ್ಲಿಂ ಕಂಡಕ್ಟರ್‌ ತಲೆ ಮೇಲಿನ ಕ್ಯಾಪ್‌ ತೆಗೆಯುವಂತೆ ಮಹಿಳಾ ಪ್ರಯಾಣಿಕರೊಬ್ಬರು ಬಲವಂತವಾಗಿ ಒತ್ತಾಯಿಸಿದ ಪ್ರಕರಣ ನಡೆದಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.
ಈ ಬೆಳವಣಗೆ ನಡುವೆಯೇ, ಘಟನೆಯ ಬಗೆಗಿನ ವೈರಲ್ ಟ್ವೀಟ್‌ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಅಪರಿಚಿತ ಮಹಿಳೆಯು ಒಂದೂವರೆ ನಿಮಿಷದ ಕ್ಲಿಪ್ ಶೂಟ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿರುವ ಕಂಡಕ್ಟರ್‌ ಸಮವಸ್ತ್ರದಲ್ಲಿದ್ದಾರೆ. ಸಮವಸ್ತ್ರದಲ್ಲಿ ಇರುವವರು ಟೊಪ್ಪಿಯನ್ನು (ಮುಸ್ಲಿಮರು ತಲೆಗೆ ಹಾಕಿಕೊಳ್ಳುವ ಟೊಪ್ಪಿ) ಧರಿಸಬಹುದೇ ಎಂದು ಕಂಡಕ್ಟರ್‌ಗೆ ಮಹಿಳೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಡಕ್ಟರ್‌ ಬಹುಶಃ ಕ್ಯಾಪ್‌ ಅನ್ನು ಧರಿಸಬಹುದೆಂದು ಕಂಡಕ್ಟರ್ ಉತ್ತರಿಸಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ‘ನೀವು ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ. ಮಸೀದಿಯೊಳಗೆ ಟೊಪ್ಪಿಯನ್ನು ಹಾಕಿಕೊಳ್ಳಿ. ಸಮವಸ್ತ್ರದಲ್ಲಿರುವಾಗ ನೀವು ಟೊಪ್ಪಿಯನ್ನು ಧರಿಸಬಾರದು’ ಎಂದು ಮಹಿಳೆ ಹೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್, ‘ನಾನು ಅನೇಕ ವರ್ಷಗಳಿಂದ ಟೊಪ್ಪಿಯನ್ನು ಧರಿಸುತ್ತಿದ್ದೇನೆ ಮೇಡಮ್’ ಎಂದು ಹೇಳುತ್ತಾರೆ. ಸಮವಸ್ತ್ರ ತೊಟ್ಟಕೊಂಡಿರುವಾಗ ಇದನ್ನು ಧರಿಸಬಹುದೇ ಎಂದು ಮಹಿಳೆ ಕೇಳುತ್ತಾರೆ. ಕ್ಯಾಪ್‌ ಅನ್ನು ತೆಗೆಯುವಂತೆ ಮಹಿಳೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಂಡಕ್ಟರ್‌ ಈ ವರೆಗೆ ಯಾರೂ ಆಕ್ಷೇಪಿಸಿಲ್ಲ. ಆ ಕಾರಣ ನಾನು ಕ್ಯಾಪ್‌ ಅನ್ನು ಧರಿಸುತ್ತಿದ್ದೇನೆ ಎಂದು ಕಂಡಕ್ಟರ್‌ ಹೇಳುತ್ತಾರೆ. ನಾನು ಈ ಬಗ್ಗೆ ನಮ್ಮ ಅಧಿಕಾರಿಗೆ ತಿಳಿಸುತ್ತೇನೆ. ಅವರು ಹೇಳಿದಂತೆ ಕೇಳುತ್ತೇನೆ ಎಂದು ಕಂಡಕ್ಟರ್‌ ಹೇಳುತ್ತಾರೆ.
ಕಂಡಕ್ಟರ್ ತನ್ನ ಹಸಿರು ಕ್ಯಾಪ್ ಅನ್ನು ತೆಗೆದುಹಾಕಬೇಕು ಎಂದು ಮಹಿಳೆ ಮತ್ತೆ ಒತ್ತಾಯಿಸುತ್ತಾರೆ. ‘ನೀವು ಅದನ್ನು ಮಸೀದಿ ಅಥವಾ ನಿಮ್ಮ ಮನೆಯಲ್ಲಿ ಧರಿಸಿದರೆ ಯಾರೂ ಆಕ್ಷೇಪಿಸುವುದಿಲ್ಲ. ಆದರೆ, ಕೆಲಸದಲ್ಲಿರುವು ಹಾಕಿಕೊಳ್ಳಬಾರದು. ಅದನ್ನು ತೆಗೆಯಿರಿ’ ಎಂದು ಮಹಿಳೆ ಒತ್ತಾಯಿಸುತ್ತಾರೆ. ಆ ನಂತರ ಕಂಡಕ್ಟರ್ ಕ್ಯಾಪ್ ಅನ್ನು ತಲೆಯ ಮೇಲಿಂದ ತೆಗೆಯುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago