Latest

ಮೈಸೂರು ನಗರ ಪೊಲೀಸರಿಂದ ಅಂತರರಾಜ್ಯ ಸರಗಳ್ಳರ ಬಂಧನ.

ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್ ಠಾಣಾ ಪೊಲೀಸರು ಕೂಡಲೇ
ಕಾರ್ಯಪ್ರವೃತ್ತರಾಗಿ ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ದಿನ ದಿನಾಂಕ: 17/05/2025 ರಂದು ಇಬ್ಬರು ಅಂತ್ಯರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಸದರಿ ಆರೋಪಿಗಳು ಲಷ್ಕರ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿದಂತೆ ದೇವರಾಜ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಲ್ಲಿ
ಕೃತ್ಯವೆಸಗಿರುವ ಬಗ್ಗೆ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು 17,00,000/- ಮೌಲ್ಯದ ಒಟ್ಟು 170 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದ ಸಂಬಂಧ ಲಷ್ಕರ್ ಠಾಣೆಯ 03 ಹಾಗೂ ದೇವರಾಜ್ ಠಾಣೆಯ 01 ಪ್ರಕರಣಗಳು ಪತ್ತೆಯಾಗಿರುತ್ತದೆ.

ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ
ಡಿ.ಸಿ.ಪಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣಾ ಇನ್ಸ್ ಪ್ಟೆರ್ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.  ವರದಿ: ಬಸವಣ್ಣ

nazeer ahamad

Recent Posts

ಚಿಕ್ಕಬಳ್ಳಾಪುರದಲ್ಲಿ ಭೀಕರ ಹತ್ಯೆ: ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ.…

10 minutes ago

ಹೋಂ ಗಾರ್ಡ್ ನೇಮಕಾತಿಗೆ ಲಂಚ: ರಾಯಚೂರಲ್ಲಿ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ”

ರಾಯಚೂರು: ಹೋಂ ಗಾರ್ಡ್ ನೇಮಕಾತಿಗೆ ಲಂಚ ಪಡೆಯುತ್ತಿದ್ದ ರಾಯಚೂರಿನ ಹೋಂ ಗಾರ್ಡ್ ಕಮಾಂಡೆಂಟ್ ಜಂಬಣ್ಣ ರಾಮಸ್ವಾಮಿ ಅವರು ಲೋಕಾಯುಕ್ತದ ಜಾಲಕ್ಕೆ…

2 hours ago

ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ…

15 hours ago

ಮಧುಗಿರಿಯಲ್ಲಿ ಬಾಲಕನ ಆತ್ಮಹತ್ಯೆ: ಅನಾರೋಗ್ಯ, ಪರೀಕ್ಷಾ ಫಲಿತಾಂಶದಿಂದ ಖಿನ್ನತೆ ಹಿನ್ನೆಲೆಯಲ್ಲಿ ದಾರುಣ ಘಟನೆ

ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ…

17 hours ago

ಲಂಚ ಪಡೆಯುವಾಗ ಜೆಸ್ಕಾಂ ಎಂಜಿನಿಯರ್ ಶೇಖರ್ ಅರೆಸ್ಟ್ : ಲೋಕಾಯುಕ್ತ ಪೊಲೀಸರ ದಾಳಿ

ಕಲಬುರಗಿಯಲ್ಲಿ ಮಂಗಳವಾರ ದಿನದ ಬೆಳಗ್ಗೆ ಮಹತ್ವದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ಗ್ರಾಮೀಣ…

18 hours ago

“ಐಟಿಐ ಕಾಲೇಜಿನಲ್ಲಿ ನಿರ್ಲಕ್ಷ್ಯದ ಛಾಯೆ: ವಿದ್ಯಾರ್ಥಿಗಳಿಗೆ ತಲುಪದೆ ಗೋದಾಮಿನಲ್ಲಿ ಹಾಳಾಗುತ್ತಿರುವ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು”

ಗೌರಿಬಿದನೂರು: ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸಮವಸ್ತ್ರ, ಶೂ, ಬ್ಯಾಗ್,…

20 hours ago