ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್ ಠಾಣಾ ಪೊಲೀಸರು ಕೂಡಲೇ
ಕಾರ್ಯಪ್ರವೃತ್ತರಾಗಿ ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ದಿನ ದಿನಾಂಕ: 17/05/2025 ರಂದು ಇಬ್ಬರು ಅಂತ್ಯರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಸದರಿ ಆರೋಪಿಗಳು ಲಷ್ಕರ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿದಂತೆ ದೇವರಾಜ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಲ್ಲಿ
ಕೃತ್ಯವೆಸಗಿರುವ ಬಗ್ಗೆ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು 17,00,000/- ಮೌಲ್ಯದ ಒಟ್ಟು 170 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದ ಸಂಬಂಧ ಲಷ್ಕರ್ ಠಾಣೆಯ 03 ಹಾಗೂ ದೇವರಾಜ್ ಠಾಣೆಯ 01 ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ
ಡಿ.ಸಿ.ಪಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣಾ ಇನ್ಸ್ ಪ್ಟೆರ್ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ. ವರದಿ: ಬಸವಣ್ಣ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…