ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್ ಠಾಣಾ ಪೊಲೀಸರು ಕೂಡಲೇ
ಕಾರ್ಯಪ್ರವೃತ್ತರಾಗಿ ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ದಿನ ದಿನಾಂಕ: 17/05/2025 ರಂದು ಇಬ್ಬರು ಅಂತ್ಯರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಸದರಿ ಆರೋಪಿಗಳು ಲಷ್ಕರ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿದಂತೆ ದೇವರಾಜ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಲ್ಲಿ
ಕೃತ್ಯವೆಸಗಿರುವ ಬಗ್ಗೆ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು 17,00,000/- ಮೌಲ್ಯದ ಒಟ್ಟು 170 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದ ಸಂಬಂಧ ಲಷ್ಕರ್ ಠಾಣೆಯ 03 ಹಾಗೂ ದೇವರಾಜ್ ಠಾಣೆಯ 01 ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ
ಡಿ.ಸಿ.ಪಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣಾ ಇನ್ಸ್ ಪ್ಟೆರ್ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ. ವರದಿ: ಬಸವಣ್ಣ
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…