ಮೈಸೂರು, ಆಗಸ್ಟ್ 5 – ಮೈಸೂರಿನ ಸರಗೂರು ತಾಲೂಕಿನ ಬಲದಂಡೆ ನಾಲೆ ಬಳಿ ಅತೀ ಶಿಥಿಲಗೊಂಡ ಹಳೆಯ ಸೇತುವೆ ಕುಸಿದಿದ್ದು, ತಮಿಳುನಾಡಿಗೆ ಭತ್ತ ಸಾಗಿಸುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ. ಅದೃಷ್ಟವಶಾತ್ ಈ ಭೀಕರ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇಟ್ನ ಗ್ರಾಮದ ಬಳಿಯಿಂದ ಭತ್ತ ತುಂಬಿಕೊಂಡು ಹೊರಟಿದ್ದ TN 52 8333 ಸಂಖ್ಯೆಯ ಲಾರಿ, ರಾತ್ರಿ ವೇಳೆ ಸಂಬಂಧಿತ ನಿಷೇಧಗಳನ್ನು ಉಲ್ಲಂಘಿಸಿ ಸೇತುವೆ ಮೂಲಕ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಇಲಾಖೆ ಹಾಗೂ ಕಬಿನಿ ಜಲಾಶಯದ ಅಧಿಕಾರಿಗಳು ಕಳೆದ ಕೆಲವು ತಿಂಗಳಿಂದ ಈ ಸೇತುವೆಯ ಸುರಕ್ಷತೆಯ ಬಗ್ಗೆ ಎಚ್ಚರಿಕೆ ನೀಡುತ್ತಾ ಬಂದಿದ್ದರು. ಆದರೆ, ರಾತ್ರಿ ಸಮಯದಲ್ಲಿ ಬ್ಯಾರಿಕೇಡ್ ತೆರಳಿಸಿ ಲಾರಿಯು ಸೇತುವೆ ಮೂಲಕ ಸಾಗಲಾಗಿದೆ.
“ಸೇತುವೆ ಶಿಥಿಲವಾಗಿದೆ ಎಂಬ ಮಾಹಿತಿ ಇದ್ದರೂ, ನಿಯಮ ಉಲ್ಲಂಘಿಸಿ ಭಾರೀ ವಾಹನಗಳು ಅಲ್ಲಿ ಸಾಗುತ್ತಿದ್ದವು. ತೂಕದ ಬಲಕ್ಕೆ ಸೇತುವೆ ಕುಸಿತವು ಸಂಭವಿಸಿದೆ,” ಎಂದು ಕಾರ್ಯಪಾಲಕ ಅಭಿಯಂತ್ರಿ ಕೆ. ಉಷಾ ಸ್ಪಷ್ಟಪಡಿಸಿದರು.
ಘಟನೆ ನಂತರ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲವೆಂದು ಆರೋಪಿಸಿದ್ದಾರೆ. ಇದೀಗ ಈ ಸೇತುವೆ ಕುಸಿತದಿಂದ ಶ್ರೀ ಚಿಕ್ಕದೇವಮ್ಮ ಬೆಟ್ಟದ ದರ್ಶನಕ್ಕೆ ಹೋಗುವ ಪ್ರಮುಖ ಸಂಪರ್ಕ ಕಡಿದುಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕಕ್ಕೂ ವ್ಯತ್ಯಯ ಉಂಟಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…