ಮೈಸೂರು, ಆಗಸ್ಟ್ 5 – ಮೈಸೂರಿನ ಸರಗೂರು ತಾಲೂಕಿನ ಬಲದಂಡೆ ನಾಲೆ ಬಳಿ ಅತೀ ಶಿಥಿಲಗೊಂಡ ಹಳೆಯ ಸೇತುವೆ ಕುಸಿದಿದ್ದು, ತಮಿಳುನಾಡಿಗೆ ಭತ್ತ ಸಾಗಿಸುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ. ಅದೃಷ್ಟವಶಾತ್ ಈ ಭೀಕರ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇಟ್ನ ಗ್ರಾಮದ ಬಳಿಯಿಂದ ಭತ್ತ ತುಂಬಿಕೊಂಡು ಹೊರಟಿದ್ದ TN 52 8333 ಸಂಖ್ಯೆಯ ಲಾರಿ, ರಾತ್ರಿ ವೇಳೆ ಸಂಬಂಧಿತ ನಿಷೇಧಗಳನ್ನು ಉಲ್ಲಂಘಿಸಿ ಸೇತುವೆ ಮೂಲಕ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಇಲಾಖೆ ಹಾಗೂ ಕಬಿನಿ ಜಲಾಶಯದ ಅಧಿಕಾರಿಗಳು ಕಳೆದ ಕೆಲವು ತಿಂಗಳಿಂದ ಈ ಸೇತುವೆಯ ಸುರಕ್ಷತೆಯ ಬಗ್ಗೆ ಎಚ್ಚರಿಕೆ ನೀಡುತ್ತಾ ಬಂದಿದ್ದರು. ಆದರೆ, ರಾತ್ರಿ ಸಮಯದಲ್ಲಿ ಬ್ಯಾರಿಕೇಡ್ ತೆರಳಿಸಿ ಲಾರಿಯು ಸೇತುವೆ ಮೂಲಕ ಸಾಗಲಾಗಿದೆ.
“ಸೇತುವೆ ಶಿಥಿಲವಾಗಿದೆ ಎಂಬ ಮಾಹಿತಿ ಇದ್ದರೂ, ನಿಯಮ ಉಲ್ಲಂಘಿಸಿ ಭಾರೀ ವಾಹನಗಳು ಅಲ್ಲಿ ಸಾಗುತ್ತಿದ್ದವು. ತೂಕದ ಬಲಕ್ಕೆ ಸೇತುವೆ ಕುಸಿತವು ಸಂಭವಿಸಿದೆ,” ಎಂದು ಕಾರ್ಯಪಾಲಕ ಅಭಿಯಂತ್ರಿ ಕೆ. ಉಷಾ ಸ್ಪಷ್ಟಪಡಿಸಿದರು.
ಘಟನೆ ನಂತರ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲವೆಂದು ಆರೋಪಿಸಿದ್ದಾರೆ. ಇದೀಗ ಈ ಸೇತುವೆ ಕುಸಿತದಿಂದ ಶ್ರೀ ಚಿಕ್ಕದೇವಮ್ಮ ಬೆಟ್ಟದ ದರ್ಶನಕ್ಕೆ ಹೋಗುವ ಪ್ರಮುಖ ಸಂಪರ್ಕ ಕಡಿದುಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕಕ್ಕೂ ವ್ಯತ್ಯಯ ಉಂಟಾಗಿದೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…