Latest

ಮೈಸೂರು ಮಾದಕ ವಸ್ತು ತಯಾರಿಕಾ ಘಟಕ ಪತ್ತೆ: ಎನ್‌ಆರ್ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮೈಸೂರು: ನಗರದ ಎನ್.ಆರ್. ಠಾಣಾ ವ್ಯಾಪ್ತಿಯಲ್ಲಿರುವ ಬನ್ನಿಮಂಟಪದ ಬಳಿ ಗ್ಯಾರೇಜ್‌ವೊಂದರಲ್ಲಿ ನಡೆಯುತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕ ಪತ್ತೆಯಾಗಿರುವ ಕರ್ತವ್ಯ ಲೋಪ ಆರೋಪದ ಮೇಲೆ ಎನ್‌ಆರ್ ಠಾಣೆಯ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.

ಬನ್ನಿಮಂಟಪದ ರಿಂಗ್‌ರಸ್ತೆ ಬಳಿಯ ಗ್ಯಾರೇಜ್‌ನಲ್ಲಿ ಡ್ರಗ್ಸ್ ತಯಾರಿಕೆ ಜೋರಾಗಿದ್ದು, ಈ ಬಗ್ಗೆ ಠಾಣೆಯ ಪೊಲೀಸ್ ಅಧಿಕಾರಿಗೆ ಮಾಹಿತಿ ಇಲ್ಲದಿರುವುದು ಗಂಭೀರ ಲೋಪವೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೆ. ಪರಿಣಾಮವಾಗಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿ, ಅವರ ಸ್ಥಳಕ್ಕೆ ಮೈಸೂರು ಸಿಸಿಬಿ ವಿಭಾಗದ ಇನ್ಸ್‌ಪೆಕ್ಟರ್ ಶಬ್ಬೀರ್ ಹುಸೇನ್ ಅವರನ್ನು ನಿಯೋಜಿಸಲಾಗಿದೆ.

ಈ ಡ್ರಗ್ಸ್ ಕಳ್ಳಸಾಗಾಣೆಯ ಬಗ್ಗೆ ಮಹಾರಾಷ್ಟ್ರ ಪೊಲೀಸರು ಮಾಹಿತಿ ಪಡೆದು ಮೈಸೂರಿಗೆ ಬಂದು ಭಾನುವಾರ ದಾಳಿ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಆರು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಘಟಕದಿಂದ ಸುಮಾರು 10 ಕೆಜಿ ಎಂಡಿಎಂಎ ಮಾದಕ ವಸ್ತು ಹಾಗೂ ಇನ್ನೂ ಅನೇಕ ಪ್ರಮಾಣದ ದ್ರವರೂಪದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಈ ಡ್ರಗ್ಸ್ ಘಟಕವು ಐಟಿ ಪಾರ್ಕ್, ವಿದ್ಯಾರ್ಥಿಗಳ ವಸತಿ ಪ್ರದೇಶಗಳಿಗೆ ಸಮೀಪವಿರುವುದರಿಂದ, ಡ್ರಗ್ಸ್ ವಿತರಣೆಯ ದೊಡ್ಡ ಜಾಲವೊಂದೇ ಇಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರಿದಿದ್ದು, ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಇದೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

1 hour ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

14 hours ago