Categories: CrimeLatestMore

ಮೈಸೂರು ದಾರುಣ ಘಟನೆ: ಪ್ರೀತಿಗೆ ಪ್ರತಿಕಾರವಾಗಿ ಯುವತಿಯ ಹತ್ಯೆ, ತಾಳಿಕಟ್ಟಿ ಸೆಲ್ಫಿ ತೆಗೆದ ಪ್ರಿಯಕರ.!

ಮೈಸೂರು: ಪ್ರೀತಿಯ ಹೆಸರಿನಲ್ಲಿ ಘೋರ ಕ್ರೂರತೆ ನಡೆಸಿದ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿದ ಯುವತಿಯೇ ತನ್ನ ಪ್ರೀತಿಗೆ ಸ್ಪಂದಿಸಿಲ್ಲವೆಂಬ ಕಾರಣಕ್ಕೆ ಯುವಕನೊಬ್ಬ ಆಕೆಯ ಕೊಲೆಗೈದು, ನಂತರ ಆಕೆಯ ಶವಕ್ಕೆ ತಾಳಿ ಕಟ್ಟಿ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ಗೂ ಅಪ್ಲೋಡ್ ಮಾಡಿದ ವಿಕೃತ ಪ್ರಕರಣ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

36 ವರ್ಷದ ಪೂರ್ಣಿಮಾ ಎಂಬ ಯುವತಿಯನ್ನು ಅಭಿಷೇಕ್ ಎಂಬಾತ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ಪ್ರೀತಿಯ ನಿರಾಕರಿಸಿದ್ದರೆಂದು ಆಕ್ರೋಶಗೊಂಡ ಅಭಿಷೇಕ್, ಪೂರ್ಣಿಮಾರ ಮೇಲೆ ಹಲ್ಲೆ ನಡೆಸಿದ ವೇಳೆ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ಸಂದರ್ಭ ಆಕೆಯ ಕುತ್ತಿಗೆಗೆ ತಾಳಿ ಕಟ್ಟಿದ ಆರೋಪಿ, ಬಳಿಕ ಆಕೆಯ ಶವದ ಬಳಿ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮಟ್ಟಕ್ಕೆ ವಿಕೃತ ಮನೋಭಾವ ತೋರಿಸಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಜಗಳ ಮತ್ತು ಕೊಲೆ ಹಿಂದಿರುವ ನಿಖರ ಕಾರಣಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆರೋಪಿ ಅಭಿಷೇಕ್‌ನ ವಿರುದ್ಧ ಆಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅಪರಾಧಗಳ ತೀವ್ರತೆಯ ಮೇಲೆ ಮತ್ತೊಂದು ಕಪ್ಪು ಮಸಿ ಬೀರುತ್ತಿದೆ.

nazeer ahamad

Recent Posts

ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್‌ನಲ್ಲಿ ಬಂದು ₹20 ಲಕ್ಷ ದರೋಡೆ

ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

1 hour ago

ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು,…

1 hour ago

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…

17 hours ago

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

1 day ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

1 day ago

ರೈತರ ಹಣ ಗುಳುಂ: ತೊಂಡೇಭಾವಿ ಹಾಲು ಡೇರಿಯಲ್ಲಿ ₹2.33 ಲಕ್ಷ ಹಣ ದುರುಪಯೋಗ.!

ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ…

1 day ago