Latest

ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಯ ನಿಗೂಢ ಆತ್ಮಹತ್ಯೆ.

ಚಿಕ್ಕಬಳ್ಳಾಪುರ ಜಿಲ್ಲೆ  ಪಟ್ರೇನಹಳ್ಳಿ ಗ್ರಾಮದಲ್ಲಿ ನಡೆದ ದುರ್ಘಟನೆ ಒಂದು ಕುಟುಂಬಬೇಸರಕ್ಕೆ ದೂಡಿದೆ. ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹೇಮಂತ್ (18) ಬುಧವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಅವರ ಸಂಬಂಧಿಯಾಗಿ ಗುರುತಿಸಲ್ಪಟ್ಟಿದ್ದಾನೆ. ಆತ ಪಟ್ರೇನಹಳ್ಳಿಯಲ್ಲಿ ಇರುವ ತಮ್ಮ ತೋಟದ ಮನೆಯಲ್ಲಿ ಈ ದುರ್ಘಟನೆಗೆ ಕೈಹಾಕಿದ್ದಾನೆ.

ಮೂಲಗಳ ಪ್ರಕಾರ, ಹೇಮಂತ್‌ನ ತಾಯಿ ಕೂಡಾ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ವಿಯಟ್ನಾಂ ಪ್ರವಾಸ ಮುಗಿಸಿ ಮನೆಗೆ ಮರಳಿದ್ದರು. ಅವರು ಬಂದದಿನವೇ, ಬುಧವಾರ ಮಧ್ಯಾಹ್ನ 3.30ರ ವೇಳೆಗೆ ಸ್ನಾನ ಮಾಡಿದ್ದು, ಬಳಿಕ ಏನೋ ಕಾರಣಕ್ಕೋ ಆತನ ಮನಸ್ಸು ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ತಿಳಿದ ತಕ್ಷಣ ಕುಟುಂಬಸ್ಥರು ಮತ್ತು ಸಂಬಂಧಿಕರು ಕಂಬನಿ ಮಿಡಿದಿದ್ದು, ಮೃತದೇಹವನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರುವವರೆಗೆ ಕುಟುಂಬದವರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸಾಮಾನ್ಯವಾಗಿ ಚೈತನ್ಯದಿಂದ ಕೂಡಿದ್ದ ಹೇಮಂತ್ ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದು ಆಘಾತಕಾರಿಯಾಗಿದೆ. ಈ ಘಟನೆ ವೈದ್ಯಕೀಯ ವಿದ್ಯಾರ್ಥಿಗಳ ಮೇಲಿನ ಒತ್ತಡ ಹಾಗೂ ಮಾನಸಿಕ ಆರೋಗ್ಯದ ಕುರಿತ ಚರ್ಚೆಗೆ ಮರುಜೀವ ನೀಡುವ ಸಾಧ್ಯತೆಯಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago