ಚಿಕ್ಕಬಳ್ಳಾಪುರ ಜಿಲ್ಲೆ ಪಟ್ರೇನಹಳ್ಳಿ ಗ್ರಾಮದಲ್ಲಿ ನಡೆದ ದುರ್ಘಟನೆ ಒಂದು ಕುಟುಂಬಬೇಸರಕ್ಕೆ ದೂಡಿದೆ. ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹೇಮಂತ್ (18) ಬುಧವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಅವರ ಸಂಬಂಧಿಯಾಗಿ ಗುರುತಿಸಲ್ಪಟ್ಟಿದ್ದಾನೆ. ಆತ ಪಟ್ರೇನಹಳ್ಳಿಯಲ್ಲಿ ಇರುವ ತಮ್ಮ ತೋಟದ ಮನೆಯಲ್ಲಿ ಈ ದುರ್ಘಟನೆಗೆ ಕೈಹಾಕಿದ್ದಾನೆ.
ಮೂಲಗಳ ಪ್ರಕಾರ, ಹೇಮಂತ್ನ ತಾಯಿ ಕೂಡಾ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ವಿಯಟ್ನಾಂ ಪ್ರವಾಸ ಮುಗಿಸಿ ಮನೆಗೆ ಮರಳಿದ್ದರು. ಅವರು ಬಂದದಿನವೇ, ಬುಧವಾರ ಮಧ್ಯಾಹ್ನ 3.30ರ ವೇಳೆಗೆ ಸ್ನಾನ ಮಾಡಿದ್ದು, ಬಳಿಕ ಏನೋ ಕಾರಣಕ್ಕೋ ಆತನ ಮನಸ್ಸು ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ತಿಳಿದ ತಕ್ಷಣ ಕುಟುಂಬಸ್ಥರು ಮತ್ತು ಸಂಬಂಧಿಕರು ಕಂಬನಿ ಮಿಡಿದಿದ್ದು, ಮೃತದೇಹವನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರುವವರೆಗೆ ಕುಟುಂಬದವರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಸಾಮಾನ್ಯವಾಗಿ ಚೈತನ್ಯದಿಂದ ಕೂಡಿದ್ದ ಹೇಮಂತ್ ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದು ಆಘಾತಕಾರಿಯಾಗಿದೆ. ಈ ಘಟನೆ ವೈದ್ಯಕೀಯ ವಿದ್ಯಾರ್ಥಿಗಳ ಮೇಲಿನ ಒತ್ತಡ ಹಾಗೂ ಮಾನಸಿಕ ಆರೋಗ್ಯದ ಕುರಿತ ಚರ್ಚೆಗೆ ಮರುಜೀವ ನೀಡುವ ಸಾಧ್ಯತೆಯಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…