Latest

ಮೈಸೂರಿನಲ್ಲಿ ದಾರುಣ ಘಟನೆ: ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್‌ನಲ್ಲಿ ಒಂದು ಕುಟುಂಬದ ನಾಲ್ವರು  ಸಾವನ್ನಪ್ಪಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರು ಕುಶಾಲ್ (15), ಚೇತನ್ (45), ರೂಪಾಲಿ (43) ಮತ್ತು ಪ್ರಿಯಂವಧಾ (62) ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯಲ್ಲಿ ಚೇತನ್ ಮೊದಲಿಗೆ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ನೀಡಿ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ವಿವರ:
ಮೃತ ಚೇತನ್ ಹಾಸನ ಜಿಲ್ಲೆಯ ಗೊರೂರು ಮೂಲದವರು, 2019 ರಿಂದ ಮೈಸೂರಿನಲ್ಲಿ ನೆಲೆಸಿದ್ದರು. ಅವರು ವಿದೇಶಕ್ಕೆ ಕಾರ್ಮಿಕರನ್ನು ಕಳುಹಿಸುವ ಉದ್ಯಮದಲ್ಲಿದ್ದರು. ಅವರ ಪತ್ನಿ ರೂಪಾಲಿ ಮೈಸೂರಿನವರಾಗಿದ್ದರು. ಕುಟುಂಬವು ಶನಿವಾರ ಗೊರೂರು ದೇವಾಲಯಕ್ಕೆ ಭೇಟಿ ನೀಡಿ, ಭಾನುವಾರ ಸಂಜೆ ಮನೆಗೆ ಮರಳಿದ್ದರೆಂದು ಮಾಹಿತಿ ಲಭ್ಯವಾಗಿದೆ.

ಪೊಲೀಸ್ ತನಿಖೆ:
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಪೊಲೀಸ್ ಇನ್ಸ್‍ಪೆಕ್ಟರ್ ಮೋಹಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

ಡೆತ್ ನೋಟ್:
ಪೊಲೀಸರು ಮನೆಯಲ್ಲಿರುವ ಡೆತ್ ನೋಟ್ ಪತ್ತೆ ಮಾಡಿದ್ದು, ಅದರಲ್ಲಿ ಚೇತನ್ ತಮ್ಮ ಸಾವಿಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಸಾವಿಗೆ ಯಾರೂ ಹೊಣೆಗಾರರಲ್ಲ. ನಮ್ಮ ಸ್ನೇಹಿತರು, ಸಂಬಂಧಿಕರಿಗೆ ತೊಂದರೆ ಕೊಡಬೇಡಿ. ಕ್ಷಮಿಸಿ, I AM SORRY” ಎಂದು ಚೇತನ್ ಡೆತ್ನೋಟ್‌ನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ.

ಈ ದುರ್ಘಟನೆಯಿಂದ ಆತನ ಸ್ನೇಹಿತರು, ಕುಟುಂಬಸ್ಥರು ಮತ್ತು ನೆರೆಹೊರೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago