Latest

ಮೈಸೂರಿನಲ್ಲಿ ದಾರುಣ ಘಟನೆ: ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್‌ನಲ್ಲಿ ಒಂದು ಕುಟುಂಬದ ನಾಲ್ವರು  ಸಾವನ್ನಪ್ಪಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರು ಕುಶಾಲ್ (15), ಚೇತನ್ (45), ರೂಪಾಲಿ (43) ಮತ್ತು ಪ್ರಿಯಂವಧಾ (62) ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯಲ್ಲಿ ಚೇತನ್ ಮೊದಲಿಗೆ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ನೀಡಿ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ವಿವರ:
ಮೃತ ಚೇತನ್ ಹಾಸನ ಜಿಲ್ಲೆಯ ಗೊರೂರು ಮೂಲದವರು, 2019 ರಿಂದ ಮೈಸೂರಿನಲ್ಲಿ ನೆಲೆಸಿದ್ದರು. ಅವರು ವಿದೇಶಕ್ಕೆ ಕಾರ್ಮಿಕರನ್ನು ಕಳುಹಿಸುವ ಉದ್ಯಮದಲ್ಲಿದ್ದರು. ಅವರ ಪತ್ನಿ ರೂಪಾಲಿ ಮೈಸೂರಿನವರಾಗಿದ್ದರು. ಕುಟುಂಬವು ಶನಿವಾರ ಗೊರೂರು ದೇವಾಲಯಕ್ಕೆ ಭೇಟಿ ನೀಡಿ, ಭಾನುವಾರ ಸಂಜೆ ಮನೆಗೆ ಮರಳಿದ್ದರೆಂದು ಮಾಹಿತಿ ಲಭ್ಯವಾಗಿದೆ.

ಪೊಲೀಸ್ ತನಿಖೆ:
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಪೊಲೀಸ್ ಇನ್ಸ್‍ಪೆಕ್ಟರ್ ಮೋಹಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

ಡೆತ್ ನೋಟ್:
ಪೊಲೀಸರು ಮನೆಯಲ್ಲಿರುವ ಡೆತ್ ನೋಟ್ ಪತ್ತೆ ಮಾಡಿದ್ದು, ಅದರಲ್ಲಿ ಚೇತನ್ ತಮ್ಮ ಸಾವಿಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಸಾವಿಗೆ ಯಾರೂ ಹೊಣೆಗಾರರಲ್ಲ. ನಮ್ಮ ಸ್ನೇಹಿತರು, ಸಂಬಂಧಿಕರಿಗೆ ತೊಂದರೆ ಕೊಡಬೇಡಿ. ಕ್ಷಮಿಸಿ, I AM SORRY” ಎಂದು ಚೇತನ್ ಡೆತ್ನೋಟ್‌ನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ.

ಈ ದುರ್ಘಟನೆಯಿಂದ ಆತನ ಸ್ನೇಹಿತರು, ಕುಟುಂಬಸ್ಥರು ಮತ್ತು ನೆರೆಹೊರೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

8 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

8 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

10 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

12 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

12 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

12 hours ago