ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಒಂದು ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರು ಕುಶಾಲ್ (15), ಚೇತನ್ (45), ರೂಪಾಲಿ (43) ಮತ್ತು ಪ್ರಿಯಂವಧಾ (62) ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯಲ್ಲಿ ಚೇತನ್ ಮೊದಲಿಗೆ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ನೀಡಿ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ವಿವರ:
ಮೃತ ಚೇತನ್ ಹಾಸನ ಜಿಲ್ಲೆಯ ಗೊರೂರು ಮೂಲದವರು, 2019 ರಿಂದ ಮೈಸೂರಿನಲ್ಲಿ ನೆಲೆಸಿದ್ದರು. ಅವರು ವಿದೇಶಕ್ಕೆ ಕಾರ್ಮಿಕರನ್ನು ಕಳುಹಿಸುವ ಉದ್ಯಮದಲ್ಲಿದ್ದರು. ಅವರ ಪತ್ನಿ ರೂಪಾಲಿ ಮೈಸೂರಿನವರಾಗಿದ್ದರು. ಕುಟುಂಬವು ಶನಿವಾರ ಗೊರೂರು ದೇವಾಲಯಕ್ಕೆ ಭೇಟಿ ನೀಡಿ, ಭಾನುವಾರ ಸಂಜೆ ಮನೆಗೆ ಮರಳಿದ್ದರೆಂದು ಮಾಹಿತಿ ಲಭ್ಯವಾಗಿದೆ.
ಪೊಲೀಸ್ ತನಿಖೆ:
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಪೊಲೀಸ್ ಇನ್ಸ್ಪೆಕ್ಟರ್ ಮೋಹಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.
ಡೆತ್ ನೋಟ್:
ಪೊಲೀಸರು ಮನೆಯಲ್ಲಿರುವ ಡೆತ್ ನೋಟ್ ಪತ್ತೆ ಮಾಡಿದ್ದು, ಅದರಲ್ಲಿ ಚೇತನ್ ತಮ್ಮ ಸಾವಿಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಸಾವಿಗೆ ಯಾರೂ ಹೊಣೆಗಾರರಲ್ಲ. ನಮ್ಮ ಸ್ನೇಹಿತರು, ಸಂಬಂಧಿಕರಿಗೆ ತೊಂದರೆ ಕೊಡಬೇಡಿ. ಕ್ಷಮಿಸಿ, I AM SORRY” ಎಂದು ಚೇತನ್ ಡೆತ್ನೋಟ್ನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ.
ಈ ದುರ್ಘಟನೆಯಿಂದ ಆತನ ಸ್ನೇಹಿತರು, ಕುಟುಂಬಸ್ಥರು ಮತ್ತು ನೆರೆಹೊರೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…