Latest

ಭಾರಿ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ – ಮುನ್ನೆಚ್ಚರಿಕೆಯಿಂದ ಪ್ರಾಣಾಪಾಯ ತಪ್ಪಿದ ಘಟನೆ

ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ ಒಳಗಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಅಲ್ಪಕಾಲದೊಳಗೆ ಹೊರಬಂದದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಅಚ್ಚರಿಯ ಸಂಗತಿಯೆಂದರೆ, ಈ ಕಟ್ಟಡವನ್ನು ಕೇವಲ ಒಂದು ವರ್ಷದ ಹಿಂದಷ್ಟೇ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿತ್ತು. ಆದರೂ ಸುರಿಯುತ್ತಿರುವ ಮಳೆಗೆ ಕಟ್ಟಡ ತಡೆಯಲಾಗದೇ ಸಂಪೂರ್ಣವಾಗಿ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆ ಎತ್ತಿದೆ.

ಘಟನೆಯ ಸಮಯದಲ್ಲಿ ಕಚೇರಿಯೊಳಗೆ ಕೆಲ ಅಧಿಕಾರಿಗಳು ಮತ್ತು ಜನರು ಇದ್ದರು. ಕಟ್ಟಡವೇ ಅಜ್ಞಾತವಾಗಿ ಬಿದ್ದಿದ್ದರಿಂದ ಗಭೀರ ಅಪಾಯ ಸಂಭವಿಸಬಹುದಾಗಿತ್ತು. ನಾಡಕಚೇರಿಯಲ್ಲಿದ್ದ ಅನೇಕ ಪ್ರಮುಖ ದಾಖಲೆಗಳು ಮಣ್ಣುಪಾಲಾಗಿವೆ.

ಈ ಕಟ್ಟಡವು ಮೂಲತಃ ಸುಮಾರು 50 ವರ್ಷ ಹಳೆಯ ಶಾಲಾ ಕಟ್ಟಡವಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವುದನ್ನು ನಾಡಕಚೇರಿ ಕಾರ್ಯಲಯವಾಗಿ ಬಳಸಲಾಗುತ್ತಿತ್ತು. ಕಳೆದ ಕೆಲ ದಿನಗಳಿಂದ ಮುಗಿಲು ಮುರಿದು ಬೀಳುತ್ತಿರುವ ಮಳೆಯ ಕಾರಣವಾಗಿ ಕಟ್ಟಡದ ಗೋಡೆಗಳು ತೇವದಿಂದ ಬಡಬಡಿಹೋಗಿ ಕೊನೆಗೆ ಧರೆಗುರುಳಿವೆ.

ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಕಾರ್ಯಲಯದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.ಜನತೆ ಸುರಕ್ಷಿತ ಮತ್ತು ಶಾಶ್ವತ ನಾಡಕಚೇರಿ ಕಟ್ಟಡಕ್ಕಾಗಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.

 

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago