ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ ಒಳಗಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಅಲ್ಪಕಾಲದೊಳಗೆ ಹೊರಬಂದದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಅಚ್ಚರಿಯ ಸಂಗತಿಯೆಂದರೆ, ಈ ಕಟ್ಟಡವನ್ನು ಕೇವಲ ಒಂದು ವರ್ಷದ ಹಿಂದಷ್ಟೇ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿತ್ತು. ಆದರೂ ಸುರಿಯುತ್ತಿರುವ ಮಳೆಗೆ ಕಟ್ಟಡ ತಡೆಯಲಾಗದೇ ಸಂಪೂರ್ಣವಾಗಿ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆ ಎತ್ತಿದೆ.
ಘಟನೆಯ ಸಮಯದಲ್ಲಿ ಕಚೇರಿಯೊಳಗೆ ಕೆಲ ಅಧಿಕಾರಿಗಳು ಮತ್ತು ಜನರು ಇದ್ದರು. ಕಟ್ಟಡವೇ ಅಜ್ಞಾತವಾಗಿ ಬಿದ್ದಿದ್ದರಿಂದ ಗಭೀರ ಅಪಾಯ ಸಂಭವಿಸಬಹುದಾಗಿತ್ತು. ನಾಡಕಚೇರಿಯಲ್ಲಿದ್ದ ಅನೇಕ ಪ್ರಮುಖ ದಾಖಲೆಗಳು ಮಣ್ಣುಪಾಲಾಗಿವೆ.
ಈ ಕಟ್ಟಡವು ಮೂಲತಃ ಸುಮಾರು 50 ವರ್ಷ ಹಳೆಯ ಶಾಲಾ ಕಟ್ಟಡವಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವುದನ್ನು ನಾಡಕಚೇರಿ ಕಾರ್ಯಲಯವಾಗಿ ಬಳಸಲಾಗುತ್ತಿತ್ತು. ಕಳೆದ ಕೆಲ ದಿನಗಳಿಂದ ಮುಗಿಲು ಮುರಿದು ಬೀಳುತ್ತಿರುವ ಮಳೆಯ ಕಾರಣವಾಗಿ ಕಟ್ಟಡದ ಗೋಡೆಗಳು ತೇವದಿಂದ ಬಡಬಡಿಹೋಗಿ ಕೊನೆಗೆ ಧರೆಗುರುಳಿವೆ.
ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಕಾರ್ಯಲಯದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.ಜನತೆ ಸುರಕ್ಷಿತ ಮತ್ತು ಶಾಶ್ವತ ನಾಡಕಚೇರಿ ಕಟ್ಟಡಕ್ಕಾಗಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…