ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ ಒಳಗಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಅಲ್ಪಕಾಲದೊಳಗೆ ಹೊರಬಂದದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಅಚ್ಚರಿಯ ಸಂಗತಿಯೆಂದರೆ, ಈ ಕಟ್ಟಡವನ್ನು ಕೇವಲ ಒಂದು ವರ್ಷದ ಹಿಂದಷ್ಟೇ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿತ್ತು. ಆದರೂ ಸುರಿಯುತ್ತಿರುವ ಮಳೆಗೆ ಕಟ್ಟಡ ತಡೆಯಲಾಗದೇ ಸಂಪೂರ್ಣವಾಗಿ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆ ಎತ್ತಿದೆ.
ಘಟನೆಯ ಸಮಯದಲ್ಲಿ ಕಚೇರಿಯೊಳಗೆ ಕೆಲ ಅಧಿಕಾರಿಗಳು ಮತ್ತು ಜನರು ಇದ್ದರು. ಕಟ್ಟಡವೇ ಅಜ್ಞಾತವಾಗಿ ಬಿದ್ದಿದ್ದರಿಂದ ಗಭೀರ ಅಪಾಯ ಸಂಭವಿಸಬಹುದಾಗಿತ್ತು. ನಾಡಕಚೇರಿಯಲ್ಲಿದ್ದ ಅನೇಕ ಪ್ರಮುಖ ದಾಖಲೆಗಳು ಮಣ್ಣುಪಾಲಾಗಿವೆ.
ಈ ಕಟ್ಟಡವು ಮೂಲತಃ ಸುಮಾರು 50 ವರ್ಷ ಹಳೆಯ ಶಾಲಾ ಕಟ್ಟಡವಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವುದನ್ನು ನಾಡಕಚೇರಿ ಕಾರ್ಯಲಯವಾಗಿ ಬಳಸಲಾಗುತ್ತಿತ್ತು. ಕಳೆದ ಕೆಲ ದಿನಗಳಿಂದ ಮುಗಿಲು ಮುರಿದು ಬೀಳುತ್ತಿರುವ ಮಳೆಯ ಕಾರಣವಾಗಿ ಕಟ್ಟಡದ ಗೋಡೆಗಳು ತೇವದಿಂದ ಬಡಬಡಿಹೋಗಿ ಕೊನೆಗೆ ಧರೆಗುರುಳಿವೆ.
ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಕಾರ್ಯಲಯದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.ಜನತೆ ಸುರಕ್ಷಿತ ಮತ್ತು ಶಾಶ್ವತ ನಾಡಕಚೇರಿ ಕಟ್ಟಡಕ್ಕಾಗಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…