Latest

ಮೃತ ರೇಣುಕಾಸ್ವಾಮಿಯ ಪುತ್ರನ ನಾಮಕರಣ: ಕುಟುಂಬದಲ್ಲಿ ಸಂತಸ, ಕಣ್ಣೀರಿನ ಕ್ಷಣಗಳು

ಚಿತ್ರದುರ್ಗ: ನಟ ದರ್ಶನ್ ಮತ್ತು ಅವರ ತಂಡದವರಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿಯ ಕುಟುಂಬದಲ್ಲಿ ಇಂದು ವಿಶಿಷ್ಟ ಸಂಭ್ರಮದ ಜೊತೆಗೆ ಭಾವುಕರ ಕ್ಷಣಗಳು ಮನೆಮಾಡಿದವು. ಮೃತ ರೇಣುಕಾಸ್ವಾಮಿಯ ಪುತ್ರನ ನಾಮಕರಣ ಸಂಭ್ರಮದ ಜೊತೆಗೆ ಕುಟುಂಬದ ನೋವನ್ನು ಮತ್ತೊಮ್ಮೆ ಎಳೆದು ತಂದಿತು.

ಪುನರ್ಜನ್ಮದ ಭಾವನೆ

ಚಿತ್ರದುರ್ಗದ ವಿಆರ್‌ಎಸ್ ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಶಾಸ್ತ್ರೋಕ್ತ ರೀತಿಯಲ್ಲಿ ಇಂದು ನಾಮಕರಣ ವಿಧಿ ನೆರವೇರಿತು. ಮಗನನ್ನು ಕಳೆದುಕೊಂಡ ನೋವಿನ ನಡುವೆಯೂ ಸಂಪ್ರದಾಯದಂತೆ ಮೊಮ್ಮಗನಿಗೆ ಶಶಿಧರ ಎಂದು ಹೆಸರಿಡಲಾಯಿತು.

ನಾಮಕರಣದ ಬಳಿಕ, ಮೃತ ರೇಣುಕಾಸ್ವಾಮಿಯ ತಂದೆ ಶಿವನಗೌಡ ಮಾತನಾಡುತ್ತ, “ನಮ್ಮ ಕುಟುಂಬಕ್ಕೆ ನಡೆದ ಅನ್ಯಾಯದ ನಿವಾರಣೆಗೆ ಸರ್ಕಾರ ಸ್ಪಂದಿಸಬೇಕು. ನನ್ನ ಸೊಸೆಗೆ ನೌಕರಿ ದೊರಕಿಸಿಕೊಡಬೇಕು,” ಎಂದು ಕಣ್ಣೀರಿಟ್ಟು ಬೇಡಿಕೆ ಮುಂದಿಟ್ಟರು.

ಈ ಸಂದರ್ಭದಲ್ಲಿ, ಮಗನನ್ನು ಕಳೆದುಕೊಂಡ ತಾಯಿ ರತ್ನಪ್ರಭ ಭಾವುಕರಾಗಿ, “ಮಗನೇ ಮತ್ತೆ ಹುಟ್ಟಿ ಬಂದಂತೆ ಅನಿಸುತ್ತಿದೆ,” ಎಂದು ಗೋಡೆಗೆ ಒರಗಿ ಕಣ್ಣೀರು ಹಾಕಿದರು.

ಸಾಂತ್ವನದ ಜೊತೆಗೆ ನ್ಯಾಯದ ನಿರೀಕ್ಷೆ

ಕುಟುಂಬದ ಸದಸ್ಯರು, ಬಂಧು-ಮಿತ್ರರು, ಹಿತೈಷಿಗಳು ನಾಮಕರಣ ಸಮಾರಂಭದಲ್ಲಿ ಭಾಗಿಯಾಗಿದ್ದು, ಮೃತ ರೇಣುಕಾಸ್ವಾಮಿಯ ನೆನಪನ್ನು ಮುರಿಯಲಾಗದು ಎಂಬ ಭಾವನೆ ವ್ಯಕ್ತಪಡಿಸಿದರು. ಕುಟುಂಬ ನ್ಯಾಯಕ್ಕಾಗಿ ಕಾಯುತ್ತಲೇ, ಮಗನ ಪುನರ್ಜನ್ಮದ ಭಾವನೆಗೆ ಒಲಿದು ಸಂತಸವನ್ನು ಹೊರಹಾಕಿತು.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago