Latest

ನಂದಿನಿ ಬೂತ್‌ಗೆ 1 ಕೋಟಿ 3 ಲಕ್ಷ ರೂ. ತೆರಿಗೆ ನೋಟಿಸ್: ಸಣ್ಣ ವ್ಯಾಪಾರಿಗಳಿಗೆ ಶಾಕ್!

ಬೆಂಗಳೂರು ನಗರದಲ್ಲಿ ಸಣ್ಣ ವ್ಯಾಪಾರಿಗಳು ತೆರಿಗೆ ಇಲಾಖೆಯ ನೋಟಿಸ್‌ಗಳಿಂದ ಹಗ್ಗಾಮಿಗೊಳಗಾಗುತ್ತಿದ್ದಾರೆ. ಉಲ್ಲಾಳದ ನಂದಿನಿ ಬೂತ್ ಮಾಲಿಕ ರವಿ ಅವರಿಗೆ ದಾಖಲೆಬದ್ಧ ವ್ಯಾಪಾರದ ಹೆಸರಿನಲ್ಲಿ ರೂ. 1 ಕೋಟಿ 3 ಲಕ್ಷ ತೆರಿಗೆ ಪಾವತಿ ಮಾಡಬೇಕೆಂದು ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಇತ್ತೀಚೆಗಿನ ಜಿಎಸ್ಟಿ ನಿಯಮಗಳ ಅನ್ವಯ, ನಗರದಲ್ಲಿನ ನಂದಿನಿ ಬೂತ್‌ಗಳನ್ನು ವಾಣಿಜ್ಯ ಪ್ರಸ್ಥಾಪನೆಗಳಂತೆ ಪರಿಗಣಿಸಿ ನೂತನ ತೆರಿಗೆಗಳು ವಿಧಿಸಲಾಗುತ್ತಿದೆ. ಈ ಕ್ರಮದಿಂದ ಸಣ್ಣ ಅಂಗಡಿಮಾಲೀಕರು, ಬೀದಿ ಬದಿಯ ವ್ಯಾಪಾರಿಗಳು, ಟೀ ಶಾಪ್ ಹಾಗೂ ಬೇಕರಿ ಮಾಲೀಕರಿಗೆ ತೀವ್ರ ಆಘಾತವಾಗಿದೆ.

ಈ ಕ್ರಮವನ್ನು ವಿರೋಧಿಸಿ ವ್ಯಾಪಾರಿಗಳು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಜುಲೈ 25 ರಂದು ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ವ್ಯಾಪಾರಿಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 23 ಮತ್ತು 24 ರಂದು ಬೆಂಗಳೂರಿನ ಕೆಲ ಅಂಗಡಿಗಳು ಮುಚ್ಚಲ್ಪಡುವ ಸಾಧ್ಯತೆ ಇದೆ.

ಸರ್ಕಾರದ ಈ ಕ್ರಮದ ವಿರುದ್ಧ ಕಿಡಿಕಾರಿದ ವ್ಯಾಪಾರಿಗಳು ಈಗ ಡಿಜಿಟಲ್ ಪೇಮೆಂಟ್‌ಗೂ ವಿರೋಧ ವ್ಯಕ್ತಪಡಿಸುತ್ತಿದ್ದು, “ಒನ್‌ಲಿ ಕ್ಯಾಶ್” ಪಲ್ಲಟದೊಂದಿಗೆ ಗ್ರಾಹಕರಿಗೆ ಹಣ ನಗದಾಗಿ ಪಾವತಿಸಲು ಸೂಚನೆ ನೀಡಿದ್ದಾರೆ. ಪೇಟಿಎಂ, ಗೂಗಲ್ ಪೇ, ಫೋನ್‌ಪೇ‌ ಮೊದಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಗೆ ವ್ಯಾಪಾರಿಗಳು ‘ನೋ ಎಂಟ್ರಿ’ ಹೇಳಿದರು. ಹಲವು ಅಂಗಡಿಗಳಲ್ಲಿ ಈಗಾಗಲೇ ಕ್ಯೂಆರ್ ಕೋಡ್‌ಗಳು ತೆಗೆದು ಹಾಕಲಾಗಿದ್ದು, ನಗದು ವ್ಯವಹಾರಗಳೇ ಮುಖ್ಯವಾಗುತ್ತಿವೆ.

ವ್ಯಾಪಾರಿಗಳ ಬೇಡಿಕೆಗಳು:

ಜಿಎಸ್ಟಿ ಹಾಗೂ ವಾಣಿಜ್ಯ ತೆರಿಗೆದಲ್ಲಿ ಸಣ್ಣ ವ್ಯಾಪಾರಿಗಳಿಗೆ ಸಡಿಲತೆ

ನಂದಿನಿ ಬೂತ್‌ಗಳಂತಹ ಸಾರ್ವಜನಿಕ ಸೇವಾ ಕೇಂದ್ರಗಳ ಮೇಲಿನ ತೆರಿಗೆದಿಂದ ವಿನಾಯಿತಿ

ಡಿಜಿಟಲ್ ಪಾವತಿಗೆ ಬದಲಾಗಿ ನಗದು ವ್ಯವಹಾರಗಳಿಗೆ ಪ್ರೋತ್ಸಾಹ

ಈ ನಿರ್ಧಾರಗಳು ಸಣ್ಣಮಧ್ಯಮ ವ್ಯಾಪಾರಿಗಳ ಆರ್ಥಿಕ ಸ್ಥಿತಿಗೆ ಕತ್ತರಿ ಹಾಕುತ್ತವೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ತೆರಿಗೆ ಇಲಾಖೆಯ ನೋಟಿಸ್ಗಳ ಮಳೆ ಸುರಿಯುತ್ತಿರುವುದು ವ್ಯಾಪಾರಿಗಳು ಸರ್ಕಾರದ ನಿಲುವಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಲು ಕಾರಣವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

16 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

16 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

16 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago