ಮೈಸೂರು: ನಂಜನಗೂಡು ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ₹1.45 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯನಿರ್ವಾಹಕ ಎಂಜಿನಿಯರ್ ಕಾವೇರಿ ರಂಗನಾಥ್ ಹಾಗೂ ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಸೆರೆಹಿಡಿದಿದ್ದಾರೆ.
2022ರಲ್ಲಿ ನಾಳೆ ದುರಸ್ತಿಗೆ ಸಂಬಂಧಿಸಿದ ₹23 ಲಕ್ಷ ಮೌಲ್ಯದ ಕಾಮಗಾರಿ ಪೂರ್ಣಗೊಳಿಸಿದ್ದ ಗುತ್ತಿಗೆದಾರ ಅಬ್ದುಲ್ ಅಜೀಜ್ ಅವರ ಬಿಲ್ ಬಿಡುಗಡೆಗೆ ಈ ಇಬ್ಬರು ಅಧಿಕಾರಿಗಳು ಶೇ.6 ರಷ್ಟು ಲಂಚ ಬೇಡಿದ್ದರು. ಹೀಗಾಗಿ ಗುತ್ತಿಗೆದಾರರು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದರು.
ದೂರಿನ ಮೇರೆಗೆ ಚಾಮರಾಜನಗರ ಲೋಕಾಯುಕ್ತ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಅವರ ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಚಾಮರಾಜನಗರದ ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹತ್ತಿಕ್ಕಿತು.
ಈ ಸಂಬಂಧ ಪ್ರಕರಣ ದಾಖಲಾಗಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಲಂಚ ಬೇಡಿಕೆ ಮತ್ತು ಸೆರೆಹಿಡಿಯಲಾದ ವಿಧಾನವನ್ನು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…