ನಂಜನಗೂಡು: ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಿಡಿಗೇಡಿಯೊಬ್ಭ ಹಸುವೊಂದರ ಕೆಚ್ಚಲು ಕುಯ್ದ ಕಹಿ ಘಟನೆ ಮಾಸುವ ಮುನ್ನವೇ ಸಿಎಂ ತವರು ನಂಜನಗೂಡಿನಲ್ಲೂ ಮೂಕ ಪ್ರಾಣಿ ಗೂಳಿಯೊಂದರ ಬಾಲ ಕತ್ತರಿಸಿ ಕ್ರೌರ್ಯಮೆರೆದಿರುವ ಘಟನೆ ಮರುಕಳಿಸಿದೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಅಂದರೆ ಶ್ರೀ ನಂಜುಂಡೇಶ್ವರನಿಗೆ ಭಕ್ತರು ಬಿಟ್ಟಿದ್ದ ಹರಕೆ ಗೂಳಿ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಗೂಳಿಯ ಬಾಲ ಕತ್ತರಿಸಿರುವ ಅಮಾನವೀಯ ಘಟನೆ ಜರುಗಿದೆ ಸನಾತನ ಹಾಗೂ ಹಿಂದೂ ಧರ್ಮದ ದಲ್ಲಿ ಪೂಜ್ಯನೀಯ ಸ್ಥಾನದಲ್ಲಿರುವ ಗೋಮಾತೆ ಹಾಗೂ ಬಸವಗಳಿಗೆ ಈ ರೀತಿ ಚಿತ್ರಹಿಂಸೆ ನೀಡುವುದು ವಿಷಾದನೀಯ ಘಟನೆಯಾಗಿದೆ
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದಲ್ಲೇ ಇರುವ ಹಳ್ಳದಕೇರಿ ಬಡಾವಣೆಯ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಓಡಾಡಿಕೊಂಡು ನಿಂತಿದ್ದ ಹರಕೆ ಗೂಳಿಯ ಬಾಲವನ್ನು ಮಚ್ಚಿನಿಂದ ಕೊಚ್ಚಿದ್ದಾರೆ.
ಇದರಿಂದಾಗಿ ಬಾಲವು ತುಂಡಾಗಿ ಬಿದ್ದಿದ್ದು, ಗೂಳಿ ರಕ್ತದ ಮಡುವಿನಲ್ಲಿ ಬಿದ್ದು ನರಲಾಡುತ್ತಿತ್ತು
ಇದನ್ನು ಕಂಡ ಗೋಳೂರು ಸ್ನೇಕ್ ಬಸವರಾಜು, ದೇವರಸನಹಳ್ಳಿ ರಾಮಕೃಷ್ಣ, ಪೈಲ್ವಾನ್ ಆದಿ ಸೇರಿದಂತೆ ಪಶು ವೈದ್ಯರು ಗೂಳಿಗೆ ಚಿಕಿತ್ಸೆನೀಡಿ ರಕ್ಷಣೆ ಮಾಡಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ ಆದರೂ ಇಂತಹ ಅಮಾನವೀಯ ಘಟನೆಗೆ ಕಾರಣರಾದವರನ್ನು ಪೊಲೀಸರು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ
ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಎಸ್ ಪಿ ವಿಷ್ಣುವರ್ಧನ್ ಭೇಟಿ
ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಿಡುವ ಹರಕೆ ಗೂಳಿಯ ಬಾಲವನ್ನು ತುಂಡರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಎಸ್ ಪಿ ನಂಜನಗೂಡು ನಗರದ ಹಳ್ಳದ ಕೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸುಮೊಟೊ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಸಿ ಕ್ಯಾಮರಗಳನ್ನು ಪರಿಶೀಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ವಿಷ್ಣುವರ್ಧನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…