Crime

ನಂಜುಂಡೇಶ್ವರನ ಹರಕೆ ಗೂಳಿಯ ಬಾಲ ಕತ್ತರಿಸಿ ಅಟ್ಟಹಾಸ ಮೆರೆದಿರುವ ಕಿರಾತಕರು..!

ನಂಜನಗೂಡು: ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಿಡಿಗೇಡಿಯೊಬ್ಭ ಹಸುವೊಂದರ ಕೆಚ್ಚಲು ಕುಯ್ದ ಕಹಿ ಘಟನೆ ಮಾಸುವ ಮುನ್ನವೇ ಸಿಎಂ ತವರು ನಂಜನಗೂಡಿನಲ್ಲೂ ಮೂಕ ಪ್ರಾಣಿ ಗೂಳಿಯೊಂದರ ಬಾಲ ಕತ್ತರಿಸಿ ಕ್ರೌರ್ಯಮೆರೆದಿರುವ ಘಟನೆ ಮರುಕಳಿಸಿದೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಅಂದರೆ ಶ್ರೀ ನಂಜುಂಡೇಶ್ವರನಿಗೆ ಭಕ್ತರು ಬಿಟ್ಟಿದ್ದ ಹರಕೆ ಗೂಳಿ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಗೂಳಿಯ ಬಾಲ ಕತ್ತರಿಸಿರುವ ಅಮಾನವೀಯ ಘಟನೆ ಜರುಗಿದೆ ಸನಾತನ ಹಾಗೂ ಹಿಂದೂ ಧರ್ಮದ ದಲ್ಲಿ ಪೂಜ್ಯನೀಯ ಸ್ಥಾನದಲ್ಲಿರುವ ಗೋಮಾತೆ ಹಾಗೂ ಬಸವಗಳಿಗೆ ಈ ರೀತಿ ಚಿತ್ರಹಿಂಸೆ ನೀಡುವುದು ವಿಷಾದನೀಯ ಘಟನೆಯಾಗಿದೆ
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದಲ್ಲೇ ಇರುವ ಹಳ್ಳದಕೇರಿ ಬಡಾವಣೆಯ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಓಡಾಡಿಕೊಂಡು ನಿಂತಿದ್ದ ಹರಕೆ ಗೂಳಿಯ ಬಾಲವನ್ನು ಮಚ್ಚಿನಿಂದ ಕೊಚ್ಚಿದ್ದಾರೆ.
ಇದರಿಂದಾಗಿ ಬಾಲವು ತುಂಡಾಗಿ ಬಿದ್ದಿದ್ದು, ಗೂಳಿ ರಕ್ತದ ಮಡುವಿನಲ್ಲಿ ಬಿದ್ದು ನರಲಾಡುತ್ತಿತ್ತು
ಇದನ್ನು ಕಂಡ ಗೋಳೂರು ಸ್ನೇಕ್ ಬಸವರಾಜು, ದೇವರಸನಹಳ್ಳಿ ರಾಮಕೃಷ್ಣ, ಪೈಲ್ವಾನ್ ಆದಿ ಸೇರಿದಂತೆ ಪಶು ವೈದ್ಯರು ಗೂಳಿಗೆ ಚಿಕಿತ್ಸೆನೀಡಿ ರಕ್ಷಣೆ ಮಾಡಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ ಆದರೂ ಇಂತಹ ಅಮಾನವೀಯ ಘಟನೆಗೆ ಕಾರಣರಾದವರನ್ನು ಪೊಲೀಸರು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ
ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಎಸ್ ಪಿ ವಿಷ್ಣುವರ್ಧನ್ ಭೇಟಿ

ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಿಡುವ ಹರಕೆ ಗೂಳಿಯ ಬಾಲವನ್ನು ತುಂಡರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಎಸ್ ಪಿ ನಂಜನಗೂಡು ನಗರದ ಹಳ್ಳದ ಕೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸುಮೊಟೊ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಸಿ ಕ್ಯಾಮರಗಳನ್ನು ಪರಿಶೀಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ವಿಷ್ಣುವರ್ಧನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago