Cinema

೧೦ ಜನರಿಗಿರುವ ಶಕ್ತಿ ನರೇಶ್ ಗೆ ಇದೆ,.. ರಾತ್ರಿ ನನಗೆ ಸುಸ್ತಾಗುತ್ತೆ,.. ನಟಿ ಪವಿತ್ರ ಲೋಕೇಶ್ ಹೇಳಿದ್ದು?

ಹಿರಿಯ ನಟ ನರೇಶ್ ಜನವರಿ 20ರಂದು 65ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭ ಮಾಧ್ಯಮಗೋಷ್ಠಿ ನಡೆಸಿ ತಮ್ಮ ಜೀವನ ಮತ್ತು ವೃತ್ತಿ ಕುರಿತು ಹಲವು ವಿಷಯಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಅವರ ಪತ್ನಿ, ನಟಿ ಪವಿತ್ರಾ ಲೋಕೇಶ್ ಕೂಡ ಭಾಗವಹಿಸಿದ್ದರು.

ನರೇಶ್ ತಮ್ಮ 52 ವರ್ಷಗಳ ಯಶಸ್ವಿ ವೃತ್ತಿಜೀವನದ ಕುರಿತು ಮಾತನಾಡಿ, ತಾಯಿ ವಿಜಯ ನಿರ್ಮಲಾ ಅವರ ಪ್ರೇರಣೆ ಮತ್ತು ಮಾರ್ಗದರ್ಶನವನ್ನು ನೆನಪಿಸಿಕೊಂಡರು. ತಾಯಿ ಜಯಗಳಿಸಿದ ಸಾಧನೆಗೆ ಪದ್ಮ ಪ್ರಶಸ್ತಿ ಕೊಡಿಸುವ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಘೋಷಿಸಿದರು. ಅಲ್ಲದೆ, ನಪುಂಸಕನ ಪಾತ್ರದಲ್ಲಿ ನಟಿಸುವುದು ತನ್ನ ಕನಸು ಎಂದು ಬಹಿರಂಗಪಡಿಸಿದರು. “ಆಹ ರೀತಿ ಪಾತ್ರದಲ್ಲಿ ನಟಿಸುವುದು ಸವಾಲಿನಿಂದ ಕೂಡಿದೆ” ಎಂದು ಅವರು ವಿವರಿಸಿದರು.

ಪವಿತ್ರಾ ತಮ್ಮ ಮಾತಿನಲ್ಲಿ, ನರೇಶ್ ಅವರ ಎನರ್ಜಿ ಮತ್ತು ಕೆಲಸದ ಮನೋಭಾವವನ್ನು ಪ್ರಶಂಸಿಸಿದರು. “ಕೆಲಸದ ವಿಚಾರ ಬಂದರೆ ಅವರಲ್ಲಿ 10 ಜನರ ಶಕ್ತಿ ಇದೆ. ದಿನ-ರಾತ್ರಿ ಕೆಲಸ ಮಾಡುವ ಸಾಮರ್ಥ್ಯ ಅವರಿಗಿದೆ, ನಾವು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನನಗೆ ರಾತ್ರಿ ಸುತಾಗುತ್ತದೆ. ಅವರೊಂದಿಗೆ ಕೆಲಸ ಮಾಡುವ ಸಿಬ್ಬಂದಿಯೂ ಸುಸ್ತಾಗಿರುತ್ತಾರೆ. ಇನ್ನುಳಿದ ಕೆಲಸ ನೀವೇ ನೋಡಿಕೊಳ್ಳಿ ಎಂದು ಹೇಳಿದರೂ ಅವರಿಗೆ ಸುಸ್ತಾಗುವುದಿಲ್ಲ” ಎಂದು ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪವಿತ್ರಾ ಅವರ ಈ ಮಾತುಗಳು ಡಬಲ್ ಮೀನಿಂಗ್ ಎಂದು ಭಾವಿಸಿ ಕಾಮೆಂಟ್ ಮಾಡಿದ್ದು, ಟ್ರೋಲಿಂಗ್‌ಗೆ ಕಾರಣವಾಗಿದೆ.

ಹುಟ್ಟುಹಬ್ಬದ ಸಂದರ್ಭ ಪವಿತ್ರಾ ನೀಡಿದ ಉಡುಗೊರೆಯೂ ವಿಶೇಷವಾಗಿತ್ತು. “ನಾನು ಕೊಟ್ಟ ಶರ್ಟ್ ಅವರು ಧರಿಸಿದ್ದಾರೆ,” ಎಂದು ಅವರು ಸಂತೋಷದಿಂದ ಹೇಳಿದರು. ಜೊತೆಗೆ, ತಮ್ಮ ಸೀರೆ ತಾವೇ ಆರಿಸಿಕೊಂಡಿರುವುದಾಗಿ ತಮಾಷೆಯಾಗಿ ಸೇರಿಸಿದರು.

ನರೇಶ್ ಮತ್ತು ಪವಿತ್ರಾ ಮಾಧ್ಯಮಗಳ ಮುಂದೆ ಮಾಡಿದ ಎಲ್ಲ ಹೇಳಿಕೆಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು, ಕೆಲವು ಟ್ರೋಲಿಂಗ್‌ಗೆ ಕಾರಣವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

8 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

9 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

9 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

11 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

12 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

15 hours ago