Cinema

೧೦ ಜನರಿಗಿರುವ ಶಕ್ತಿ ನರೇಶ್ ಗೆ ಇದೆ,.. ರಾತ್ರಿ ನನಗೆ ಸುಸ್ತಾಗುತ್ತೆ,.. ನಟಿ ಪವಿತ್ರ ಲೋಕೇಶ್ ಹೇಳಿದ್ದು?

ಹಿರಿಯ ನಟ ನರೇಶ್ ಜನವರಿ 20ರಂದು 65ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭ ಮಾಧ್ಯಮಗೋಷ್ಠಿ ನಡೆಸಿ ತಮ್ಮ ಜೀವನ ಮತ್ತು ವೃತ್ತಿ ಕುರಿತು ಹಲವು ವಿಷಯಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಅವರ ಪತ್ನಿ, ನಟಿ ಪವಿತ್ರಾ ಲೋಕೇಶ್ ಕೂಡ ಭಾಗವಹಿಸಿದ್ದರು.

ನರೇಶ್ ತಮ್ಮ 52 ವರ್ಷಗಳ ಯಶಸ್ವಿ ವೃತ್ತಿಜೀವನದ ಕುರಿತು ಮಾತನಾಡಿ, ತಾಯಿ ವಿಜಯ ನಿರ್ಮಲಾ ಅವರ ಪ್ರೇರಣೆ ಮತ್ತು ಮಾರ್ಗದರ್ಶನವನ್ನು ನೆನಪಿಸಿಕೊಂಡರು. ತಾಯಿ ಜಯಗಳಿಸಿದ ಸಾಧನೆಗೆ ಪದ್ಮ ಪ್ರಶಸ್ತಿ ಕೊಡಿಸುವ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಘೋಷಿಸಿದರು. ಅಲ್ಲದೆ, ನಪುಂಸಕನ ಪಾತ್ರದಲ್ಲಿ ನಟಿಸುವುದು ತನ್ನ ಕನಸು ಎಂದು ಬಹಿರಂಗಪಡಿಸಿದರು. “ಆಹ ರೀತಿ ಪಾತ್ರದಲ್ಲಿ ನಟಿಸುವುದು ಸವಾಲಿನಿಂದ ಕೂಡಿದೆ” ಎಂದು ಅವರು ವಿವರಿಸಿದರು.

ಪವಿತ್ರಾ ತಮ್ಮ ಮಾತಿನಲ್ಲಿ, ನರೇಶ್ ಅವರ ಎನರ್ಜಿ ಮತ್ತು ಕೆಲಸದ ಮನೋಭಾವವನ್ನು ಪ್ರಶಂಸಿಸಿದರು. “ಕೆಲಸದ ವಿಚಾರ ಬಂದರೆ ಅವರಲ್ಲಿ 10 ಜನರ ಶಕ್ತಿ ಇದೆ. ದಿನ-ರಾತ್ರಿ ಕೆಲಸ ಮಾಡುವ ಸಾಮರ್ಥ್ಯ ಅವರಿಗಿದೆ, ನಾವು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನನಗೆ ರಾತ್ರಿ ಸುತಾಗುತ್ತದೆ. ಅವರೊಂದಿಗೆ ಕೆಲಸ ಮಾಡುವ ಸಿಬ್ಬಂದಿಯೂ ಸುಸ್ತಾಗಿರುತ್ತಾರೆ. ಇನ್ನುಳಿದ ಕೆಲಸ ನೀವೇ ನೋಡಿಕೊಳ್ಳಿ ಎಂದು ಹೇಳಿದರೂ ಅವರಿಗೆ ಸುಸ್ತಾಗುವುದಿಲ್ಲ” ಎಂದು ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪವಿತ್ರಾ ಅವರ ಈ ಮಾತುಗಳು ಡಬಲ್ ಮೀನಿಂಗ್ ಎಂದು ಭಾವಿಸಿ ಕಾಮೆಂಟ್ ಮಾಡಿದ್ದು, ಟ್ರೋಲಿಂಗ್‌ಗೆ ಕಾರಣವಾಗಿದೆ.

ಹುಟ್ಟುಹಬ್ಬದ ಸಂದರ್ಭ ಪವಿತ್ರಾ ನೀಡಿದ ಉಡುಗೊರೆಯೂ ವಿಶೇಷವಾಗಿತ್ತು. “ನಾನು ಕೊಟ್ಟ ಶರ್ಟ್ ಅವರು ಧರಿಸಿದ್ದಾರೆ,” ಎಂದು ಅವರು ಸಂತೋಷದಿಂದ ಹೇಳಿದರು. ಜೊತೆಗೆ, ತಮ್ಮ ಸೀರೆ ತಾವೇ ಆರಿಸಿಕೊಂಡಿರುವುದಾಗಿ ತಮಾಷೆಯಾಗಿ ಸೇರಿಸಿದರು.

ನರೇಶ್ ಮತ್ತು ಪವಿತ್ರಾ ಮಾಧ್ಯಮಗಳ ಮುಂದೆ ಮಾಡಿದ ಎಲ್ಲ ಹೇಳಿಕೆಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು, ಕೆಲವು ಟ್ರೋಲಿಂಗ್‌ಗೆ ಕಾರಣವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಹೊಸ ಠಾಣೆಗೆ ಹೋಗುವ ಮಾರ್ಗದಲ್ಲೇ ಎಎಸ್‌ಐ ಹೃದಯಾಘಾತಕ್ಕೆ ಬಲಿ

ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್‌ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ…

5 hours ago

ಪತ್ನಿ ದಪ್ಪಗಿದ್ದಾಳೆಂದು ಕ್ರೂರ ಹತ್ಯೆ: ಪತಿ ಸೇರಿ ನಾಲ್ವರು ಪೊಲೀಸರ ಬಲೆಗೆ

ಧಾರವಾಡ: ಪತ್ನಿ ದೈಹಿಕವಾಗಿ ದಪ್ಪಗಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನುಷ ಘಟನೆ ಧಾರವಾಡ ಜಿಲ್ಲೆಯ…

5 hours ago

ಹಣಕ್ಕಾಗಿ ಬಂದಿದ್ದ ವೃದ್ಧೆಯ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: 39 ಗ್ರಾಂ ಚಿನ್ನಾಭರಣ ವಶ

ರಾಮನಗರ: ತಾಲೂಕಿನ ಸಂಗಬಸವನದೊಡ್ಡಿ ಗ್ರಾಮದಲ್ಲಿ ಹಣ ಕೇಳಲು ಬಂದಿದ್ದ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ರೈಲ್ವೆ ಹಳಿ ಬಳಿ ಎಸೆದಿದ್ದ…

5 hours ago

99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಸಚಿವ ಭಗೀರಥ್ ಚೌಧರಿ; ‘ನಾನೂ ರೈತನೇ’ ಎಂದು ಸಮರ್ಥನೆ

ನವದೆಹಲಿ: ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವ ಕೇಂದ್ರ ಕೃಷಿ ಮತ್ತು ರೈತರ…

15 hours ago

ವಿಚ್ಛೇದನದ ಅಂಚಿನಲ್ಲಿ ಗೌರವ್ ಖನ್ನಾ–ಆಕಾಂಕ್ಷಾ ಚಮೋಲಾ ದಾಂಪತ್ಯ? ಲಾಕ್ ಅಪ್ 2ರಲ್ಲಿ ಆಘಾತಕಾರಿ ಬಹಿರಂಗ

ಮುಂಬೈ: ನಟಿ ಆಕಾಂಕ್ಷಾ ಚಮೋಲಾ ಅವರು ಲಾಕ್ ಅಪ್ ಸೀಸನ್ 2 ಕಾರ್ಯಕ್ರಮದಲ್ಲಿ ತಮ್ಮ ವೈಯಕ್ತಿಕ ಜೀವನದ ಕುರಿತು ಆಘಾತಕಾರಿ…

15 hours ago

ರಾಜ್ಯ ಸರ್ಕಾರದಿಂದ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಇಲಾಖೆಗಳಿಗೆ ಹೊಸ ನೇಮಕಾತಿ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಪುನರ್‌ವ್ಯವಸ್ಥೆಯ ಭಾಗವಾಗಿ ಸ್ಥಳ ನಿಯುಕ್ತಿ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವಿವಿಧ ಪ್ರಮುಖ ಹುದ್ದೆಗಳಿಗೆ…

15 hours ago