ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್ ಮ್ಯಾನೇಜರ್ ಹಾಗೂ ಆಪರೇಷನ್ ಹೆಡ್ ಆಗಿದ್ದ ನಿದಾ ಖಾನ್ ಎಂಬವರು ಸಂತ್ರಸ್ತೆಯರು ದೂರು ನೀಡದಂತೆ ತಡೆದು ಆರೋಪಿಗಳ ಪರವಾಗಿ ನಿಂತಿದ್ದರೆಂಬ ಆರೋಪ ಬೆಳಕಿಗೆ ಬಂದಿದೆ.
ಈ ಬಗ್ಗೆ ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಮಾಹಿತಿ ನೀಡಿದ್ದು, ನಿದಾ ಖಾನ್ ಸಂತ್ರಸ್ತೆಯರನ್ನು ದೂರು ಮುಂದುವರಿಸದಂತೆ ಅಡ್ಡಿಪಡಿಸಿದ್ದಾಳೆ ಎಂದು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪ್ರಕರಣ ಬಹಿರಂಗವಾದ ನಂತರ ನಿದಾ ಖಾನ್ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಂಬತ್ತು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಇದುವರೆಗೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಡ್ಯಾನಿಶ್ ಶೇಖ್, ತೌಸಿಫ್ ಅತ್ತಾರ್, ರಾಜಾ ಮೆಮನ್, ಶಾರುಖ್ ಖುರೇಷಿ, ಶಫಿ ಶೇಖ್, ಆಸಿಫ್ ಅಫ್ತಾಬ್ ಅನ್ಸಾರ್ ಹಾಗೂ ಶಾರುಖ್ ಶೇಖ್ ಸೇರಿದ್ದಾರೆ. ಮತ್ತೊಬ್ಬ ಮಹಿಳಾ ಆರೋಪಿಯನ್ನು ಏಪ್ರಿಲ್ 28ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದೇ ವೇಳೆ, ಉಗ್ರ ಸಂಘಟನೆಗಳು ಅಥವಾ ವಿದೇಶಿ ಸಂಪರ್ಕಗಳ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿರುವುದರಿಂದ, ಎಸ್ಐಡಿ, ಎಟಿಎಸ್ ಹಾಗೂ ಎನ್ಐಎ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳೊಂದಿಗೆ ಮಾಹಿತಿ ಹಂಚಿಕೆ ಮಾಡಲಾಗಿದೆ. ಪೂರಕ ಸಾಕ್ಷ್ಯಗಳು ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಎಂಟು ಮಹಿಳಾ ಉದ್ಯೋಗಿಗಳು ತಮ್ಮ ಹಿರಿಯ ಸಹೋದ್ಯೋಗಿಗಳಿಂದ ಮತಾಂತರವಾಗುವಂತೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಗ್ಗೆ ದೂರು ನೀಡಿದ್ದಾರೆ. ಆದರೆ ಈ ದೂರುಗಳನ್ನು ಮಾನವ ಸಂಪನ್ಮೂಲ ವಿಭಾಗ ನಿರ್ಲಕ್ಷಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಸಂತ್ರಸ್ತೆಯರ ಹೇಳಿಕೆ ಪಡೆಯಲು ಮಹಿಳಾ ಜಿಲ್ಲಾಧಿಕಾರಿ ಹಾಗೂ ಇತರ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಕೌನ್ಸೆಲಿಂಗ್ ನಂತರ ಇನ್ನಷ್ಟು ಮಹಿಳೆಯರು ಮುಂದೆ ಬಂದು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…