ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಹೃದಯಾಘಾತದ ಘಟನೆಗಳು ಹೆಚ್ಚುತ್ತಿರುವ ನಡುವೆ ನವಲಗುಂದ ಪಟ್ಟಣ ಮತ್ತು ಯಮನೂರಿನಲ್ಲಿ ಇಬ್ಬರು ವ್ಯಕ್ತಿಗಳು ಅಕಾಲಿಕವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಅಮೂಲ್ಯ ಜೀವ ಹರಣದ ಘಟನೆಗಳು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ದುಃಖದ ಮೋಡವನ್ನು ಹರಡಿವೆ.
ನವಲಗುಂದ ಪುರಸಭೆಯ ಮಾಜಿ ಉಪಾಧ್ಯಕ್ಷೆ ಪದ್ಮಾವತಿ ಪೂಜಾರಿ ಅವರ ಪುತ್ರ ಮುತ್ತಪ್ಪ ಶಂಕ್ರಪ್ಪ ಪೂಜಾರಿ (44) ಅವರು ಸೋಮವಾರ ರಾತ್ರಿ ನಿದ್ರಿಸುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾದರು. ದಿನವಿಡೀ ಚುರುಕುತನದಿಂದ ಇರುವಾಗಲೇ ರಾತ್ರೋರಾತ್ರಿ ನಡೆದ ಈ ದುರಂತವು ಕುಟುಂಬದವರೊಂದಿಗೆ ಸಹಮರ್ತಕರನ್ನು ಕೂಡ ಬೆಚ್ಚಿಬೀಳಿಸಿದೆ. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಸಹೋದರನನ್ನು ಅಗಲಿದ್ದಾರೆ.
ಇನ್ನೊಂದು ದುರ್ಘಟನೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಸಂಭವಿಸಿದ್ದು, ಅಲ್ಲಿನ ಕೇಬಲ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಫಕೀರಪ್ಪ ಮಲ್ಲಪ್ಪ ಬಣಗಾರ (45) ಅವರು ಕೂಡ ಸೋಮವಾರ ರಾತ್ರಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನಿದ್ದಾರೆ.
ಲವಲವಿಕೆಯಿಂದ ಬದುಕು ನಡೆಸುತ್ತಿದ್ದ ಈ ಇಬ್ಬರ ನಿಷ್ಟುರ ಅಂತ್ಯದಿಂದ ನವಲಗುಂದ ಹಾಗೂ ಯಮನೂರಿನಲ್ಲಿ ಶೋಕದ ನೆರಳು ಆವರಿಸಿದೆ. ಇಬ್ಬರೂ ಕುಟುಂಬದ ಅಡಿಪಾಯವಾಗಿದ್ದ ವ್ಯಕ್ತಿಗಳ ಅಗಲಿಕೆ, ಸ್ಥಳೀಯರಲ್ಲಿ ಭಯ ಹಾಗೂ ದುಃಖ ಮೂಡಿಸಿದೆ. ವರದಿ: ಶಿವು ಪಿ.ಆರ್.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…