ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಹೃದಯಾಘಾತದ ಘಟನೆಗಳು ಹೆಚ್ಚುತ್ತಿರುವ ನಡುವೆ ನವಲಗುಂದ ಪಟ್ಟಣ ಮತ್ತು ಯಮನೂರಿನಲ್ಲಿ ಇಬ್ಬರು ವ್ಯಕ್ತಿಗಳು ಅಕಾಲಿಕವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಅಮೂಲ್ಯ ಜೀವ ಹರಣದ ಘಟನೆಗಳು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ದುಃಖದ ಮೋಡವನ್ನು ಹರಡಿವೆ.
ನವಲಗುಂದ ಪುರಸಭೆಯ ಮಾಜಿ ಉಪಾಧ್ಯಕ್ಷೆ ಪದ್ಮಾವತಿ ಪೂಜಾರಿ ಅವರ ಪುತ್ರ ಮುತ್ತಪ್ಪ ಶಂಕ್ರಪ್ಪ ಪೂಜಾರಿ (44) ಅವರು ಸೋಮವಾರ ರಾತ್ರಿ ನಿದ್ರಿಸುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾದರು. ದಿನವಿಡೀ ಚುರುಕುತನದಿಂದ ಇರುವಾಗಲೇ ರಾತ್ರೋರಾತ್ರಿ ನಡೆದ ಈ ದುರಂತವು ಕುಟುಂಬದವರೊಂದಿಗೆ ಸಹಮರ್ತಕರನ್ನು ಕೂಡ ಬೆಚ್ಚಿಬೀಳಿಸಿದೆ. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಸಹೋದರನನ್ನು ಅಗಲಿದ್ದಾರೆ.
ಇನ್ನೊಂದು ದುರ್ಘಟನೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಸಂಭವಿಸಿದ್ದು, ಅಲ್ಲಿನ ಕೇಬಲ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಫಕೀರಪ್ಪ ಮಲ್ಲಪ್ಪ ಬಣಗಾರ (45) ಅವರು ಕೂಡ ಸೋಮವಾರ ರಾತ್ರಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನಿದ್ದಾರೆ.
ಲವಲವಿಕೆಯಿಂದ ಬದುಕು ನಡೆಸುತ್ತಿದ್ದ ಈ ಇಬ್ಬರ ನಿಷ್ಟುರ ಅಂತ್ಯದಿಂದ ನವಲಗುಂದ ಹಾಗೂ ಯಮನೂರಿನಲ್ಲಿ ಶೋಕದ ನೆರಳು ಆವರಿಸಿದೆ. ಇಬ್ಬರೂ ಕುಟುಂಬದ ಅಡಿಪಾಯವಾಗಿದ್ದ ವ್ಯಕ್ತಿಗಳ ಅಗಲಿಕೆ, ಸ್ಥಳೀಯರಲ್ಲಿ ಭಯ ಹಾಗೂ ದುಃಖ ಮೂಡಿಸಿದೆ. ವರದಿ: ಶಿವು ಪಿ.ಆರ್.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…