Latest

ನವಲಗುಂದ: ಹೃದಯಾಘಾತಕ್ಕೆ ಇಬ್ಬರ ಬಲಿ, ಪಟ್ಟಣ ಹಾಗೂ ಗ್ರಾಮದಲ್ಲಿ ಶೋಕಾಚ್ಛಾದನೆ

ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಹೃದಯಾಘಾತದ ಘಟನೆಗಳು ಹೆಚ್ಚುತ್ತಿರುವ ನಡುವೆ ನವಲಗುಂದ ಪಟ್ಟಣ ಮತ್ತು ಯಮನೂರಿನಲ್ಲಿ ಇಬ್ಬರು ವ್ಯಕ್ತಿಗಳು ಅಕಾಲಿಕವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಅಮೂಲ್ಯ ಜೀವ ಹರಣದ ಘಟನೆಗಳು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ದುಃಖದ ಮೋಡವನ್ನು ಹರಡಿವೆ.

ನವಲಗುಂದ ಪುರಸಭೆಯ ಮಾಜಿ ಉಪಾಧ್ಯಕ್ಷೆ ಪದ್ಮಾವತಿ ಪೂಜಾರಿ ಅವರ ಪುತ್ರ ಮುತ್ತಪ್ಪ ಶಂಕ್ರಪ್ಪ ಪೂಜಾರಿ (44) ಅವರು ಸೋಮವಾರ ರಾತ್ರಿ ನಿದ್ರಿಸುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾದರು. ದಿನವಿಡೀ ಚುರುಕುತನದಿಂದ ಇರುವಾಗಲೇ ರಾತ್ರೋರಾತ್ರಿ ನಡೆದ ಈ ದುರಂತವು ಕುಟುಂಬದವರೊಂದಿಗೆ ಸಹಮರ್ತಕರನ್ನು ಕೂಡ ಬೆಚ್ಚಿಬೀಳಿಸಿದೆ. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಸಹೋದರನನ್ನು ಅಗಲಿದ್ದಾರೆ.

ಇನ್ನೊಂದು ದುರ್ಘಟನೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಸಂಭವಿಸಿದ್ದು, ಅಲ್ಲಿನ ಕೇಬಲ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಫಕೀರಪ್ಪ ಮಲ್ಲಪ್ಪ ಬಣಗಾರ (45) ಅವರು ಕೂಡ ಸೋಮವಾರ ರಾತ್ರಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನಿದ್ದಾರೆ.

ಲವಲವಿಕೆಯಿಂದ ಬದುಕು ನಡೆಸುತ್ತಿದ್ದ ಈ ಇಬ್ಬರ ನಿಷ್ಟುರ ಅಂತ್ಯದಿಂದ ನವಲಗುಂದ ಹಾಗೂ ಯಮನೂರಿನಲ್ಲಿ ಶೋಕದ ನೆರಳು ಆವರಿಸಿದೆ. ಇಬ್ಬರೂ ಕುಟುಂಬದ ಅಡಿಪಾಯವಾಗಿದ್ದ ವ್ಯಕ್ತಿಗಳ ಅಗಲಿಕೆ, ಸ್ಥಳೀಯರಲ್ಲಿ ಭಯ ಹಾಗೂ ದುಃಖ ಮೂಡಿಸಿದೆ. ವರದಿ: ಶಿವು ಪಿ.ಆರ್.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago