ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಇಂದು ಅಂತಿಮ ತೆರೆಬಿದ್ದಿದೆ. ಶೃಂಗೇರಿಯ ಕೋಟೆಹೊಂಡ ಗ್ರಾಮದ ನಿವಾಸಿ ರವೀಂದ್ರ, ಕೆಂಪು ಉಗ್ರರ ಕೊನೆಯ ಪ್ರತಿನಿಧಿಯಾಗಿ, ಸ್ವಯಂ ಪ್ರೇರಿತವಾಗಿ ಪೊಲೀಸರು ಮುಂದೆ ಶರಣಾಗಿದ್ದಾರೆ.
ರವೀಂದ್ರ ಅವರು ನಾಗರಿಕ ಶಾಂತಿ ವೇದಿಕೆ ಸದಸ್ಯರ ಜತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಎದುರು ಶರಣಾಗಿದ್ದು, ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಸಮಾಧಾನಕರ ಜೀವನಕ್ಕೆ ಮರಳಲು ನಿರ್ಧಾರ ಮಾಡಿರುವುದು ಮಹತ್ವದ್ದಾಗಿದೆ.
ಜನವರಿ 8 ರಂದು, ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 6 ಜನ ನಕ್ಸಲರು ಶರಣಾಗಿದ್ದರು. ಇದರಿಂದಾಗಿ, ಜಿಲ್ಲೆಯಲ್ಲಿ ನಕ್ಸಲ್ ಪ್ರಭಾವ ಕಡಿಮೆಯಾಗಿದ್ದು, ಕಾಡಿನೊಳಗಿನ ಮುಟ್ಟಿಯಾಗಿದ್ದ ಕೊನೆಯ ನಕ್ಸಲ್ ರವೀಂದ್ರನ ಶರಣಾಗತಿಯೊಂದಿಗೆ ಈ ಚಳುವಳಿ ಸಂಪೂರ್ಣ ಕೊನೆಗೊಂಡಂತಾಗಿದೆ.
ಈ ಬೆಳವಣಿಗೆಯಿಂದ, ಚಿಕ್ಕಮಗಳೂರಿನ ಜನತೆ ನಿರಾಳತೆ ಅನುಭವಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಸಹ ಶಾಂತಿ ಸ್ಥಾಪನೆಗಾಗಿ ಮತ್ತಷ್ಟು ಕ್ರಮ ಕೈಗೊಳ್ಳಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…