ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಇಂದು ಅಂತಿಮ ತೆರೆಬಿದ್ದಿದೆ. ಶೃಂಗೇರಿಯ ಕೋಟೆಹೊಂಡ ಗ್ರಾಮದ ನಿವಾಸಿ ರವೀಂದ್ರ, ಕೆಂಪು ಉಗ್ರರ ಕೊನೆಯ ಪ್ರತಿನಿಧಿಯಾಗಿ, ಸ್ವಯಂ ಪ್ರೇರಿತವಾಗಿ ಪೊಲೀಸರು ಮುಂದೆ ಶರಣಾಗಿದ್ದಾರೆ.
ರವೀಂದ್ರ ಅವರು ನಾಗರಿಕ ಶಾಂತಿ ವೇದಿಕೆ ಸದಸ್ಯರ ಜತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಎದುರು ಶರಣಾಗಿದ್ದು, ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಸಮಾಧಾನಕರ ಜೀವನಕ್ಕೆ ಮರಳಲು ನಿರ್ಧಾರ ಮಾಡಿರುವುದು ಮಹತ್ವದ್ದಾಗಿದೆ.
ಜನವರಿ 8 ರಂದು, ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 6 ಜನ ನಕ್ಸಲರು ಶರಣಾಗಿದ್ದರು. ಇದರಿಂದಾಗಿ, ಜಿಲ್ಲೆಯಲ್ಲಿ ನಕ್ಸಲ್ ಪ್ರಭಾವ ಕಡಿಮೆಯಾಗಿದ್ದು, ಕಾಡಿನೊಳಗಿನ ಮುಟ್ಟಿಯಾಗಿದ್ದ ಕೊನೆಯ ನಕ್ಸಲ್ ರವೀಂದ್ರನ ಶರಣಾಗತಿಯೊಂದಿಗೆ ಈ ಚಳುವಳಿ ಸಂಪೂರ್ಣ ಕೊನೆಗೊಂಡಂತಾಗಿದೆ.
ಈ ಬೆಳವಣಿಗೆಯಿಂದ, ಚಿಕ್ಕಮಗಳೂರಿನ ಜನತೆ ನಿರಾಳತೆ ಅನುಭವಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಸಹ ಶಾಂತಿ ಸ್ಥಾಪನೆಗಾಗಿ ಮತ್ತಷ್ಟು ಕ್ರಮ ಕೈಗೊಳ್ಳಲಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…