ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಇಂದು ಅಂತಿಮ ತೆರೆಬಿದ್ದಿದೆ. ಶೃಂಗೇರಿಯ ಕೋಟೆಹೊಂಡ ಗ್ರಾಮದ ನಿವಾಸಿ ರವೀಂದ್ರ, ಕೆಂಪು ಉಗ್ರರ ಕೊನೆಯ ಪ್ರತಿನಿಧಿಯಾಗಿ, ಸ್ವಯಂ ಪ್ರೇರಿತವಾಗಿ ಪೊಲೀಸರು ಮುಂದೆ ಶರಣಾಗಿದ್ದಾರೆ.
ರವೀಂದ್ರ ಅವರು ನಾಗರಿಕ ಶಾಂತಿ ವೇದಿಕೆ ಸದಸ್ಯರ ಜತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಎದುರು ಶರಣಾಗಿದ್ದು, ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಸಮಾಧಾನಕರ ಜೀವನಕ್ಕೆ ಮರಳಲು ನಿರ್ಧಾರ ಮಾಡಿರುವುದು ಮಹತ್ವದ್ದಾಗಿದೆ.
ಜನವರಿ 8 ರಂದು, ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 6 ಜನ ನಕ್ಸಲರು ಶರಣಾಗಿದ್ದರು. ಇದರಿಂದಾಗಿ, ಜಿಲ್ಲೆಯಲ್ಲಿ ನಕ್ಸಲ್ ಪ್ರಭಾವ ಕಡಿಮೆಯಾಗಿದ್ದು, ಕಾಡಿನೊಳಗಿನ ಮುಟ್ಟಿಯಾಗಿದ್ದ ಕೊನೆಯ ನಕ್ಸಲ್ ರವೀಂದ್ರನ ಶರಣಾಗತಿಯೊಂದಿಗೆ ಈ ಚಳುವಳಿ ಸಂಪೂರ್ಣ ಕೊನೆಗೊಂಡಂತಾಗಿದೆ.
ಈ ಬೆಳವಣಿಗೆಯಿಂದ, ಚಿಕ್ಕಮಗಳೂರಿನ ಜನತೆ ನಿರಾಳತೆ ಅನುಭವಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಸಹ ಶಾಂತಿ ಸ್ಥಾಪನೆಗಾಗಿ ಮತ್ತಷ್ಟು ಕ್ರಮ ಕೈಗೊಳ್ಳಲಿದೆ.
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…
ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.…
ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್…
ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ…