ಮೊದಲ ಬಾರಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಆಡಳಿತಾತ್ಮಕ ಬದಲಾವಣೆ ನಡೆಯುತ್ತಿದೆ. ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಕಠಿಣ ಕ್ರಮಗಳಿಗೆ ಮುಂದಾಗಿದೆ. ಈ ಕ್ರಮದ ಭಾಗವಾಗಿ ಈಗಾಗಲೇ ಸುಮಾರು 47 ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎನ್ಟಿಎ ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳಾದ NEET-UG, JEE Main, CUET ಸೇರಿದಂತೆ 15 ರಿಂದ 20 ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ನಡೆಸುವ ಪ್ರಮುಖ ಸಂಸ್ಥೆಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ, ಮುಂದಿನ ಒಂದು ತಿಂಗಳೊಳಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ.
ಸಿಬ್ಬಂದಿ ಬದಲಾವಣೆ ಮಾತ್ರವಲ್ಲ, ಆಡಳಿತಕ್ಕೂ ಮೇಜರ್ ಸರ್ಜರಿ
ವಜಾಗೊಂಡಿರುವ 47 ಸಿಬ್ಬಂದಿಯಲ್ಲಿ ಕೆಲವರ ವಿರುದ್ಧ ಗಂಭೀರ ಶಿಸ್ತು ಕ್ರಮಗಳೂ ಕೈಗೊಳ್ಳಲಾಗುತ್ತಿದೆ. ಕೇವಲ ಸಿಬ್ಬಂದಿ ಬದಲಾವಣೆ ಮಾಡುವುದಲ್ಲದೆ, ಸಂಸ್ಥೆಯ ಜವಾಬ್ದಾರಿ, ಹೊಣೆಗಾರಿಕೆ ಹಾಗೂ ಕಾರ್ಯನಿರ್ವಹಣೆಯ ಸಂಪೂರ್ಣ ವ್ಯವಸ್ಥೆಯನ್ನು ಮರುರೂಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಔಟ್ಸೋರ್ಸಿಂಗ್ ವ್ಯವಸ್ಥೆಗೆ ಬ್ರೇಕ್
ಪರೀಕ್ಷಾ ಪ್ರಕ್ರಿಯೆಯಲ್ಲಿ ಹೊರಗುತ್ತಿಗೆ (Outsourcing) ಮಾದರಿಯನ್ನು ಅವಲಂಬಿಸಿರುವ ವಿಧಾನದಲ್ಲೂ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗುವ ಸಾಧ್ಯತೆ ಇರುವ ಹಂತಗಳನ್ನು ಗುರುತಿಸಿ, ಅವುಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಹೊಸ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೆ ಬರಲಿದೆ.
ಪೇಪರ್ ಲೀಕ್ ತಡೆಗೆ ಹೈಟೆಕ್ ಭದ್ರತೆ
ಉನ್ನತ ಮಟ್ಟದ ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಪರೀಕ್ಷಾ ವ್ಯವಸ್ಥೆಯಲ್ಲಿ ತಾಂತ್ರಿಕ ಹಾಗೂ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಪಾರದರ್ಶಕತೆ ಹೆಚ್ಚಿಸುವುದರ ಜೊತೆಗೆ, ಯಾವುದೇ ಸಂದರ್ಭದಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಅಳವಡಿಸುವ ಯೋಜನೆ ಸರ್ಕಾರದ ಮುಂದಿದೆ.
ಐತಿಹಾಸಿಕ ಸುಧಾರಣೆಗೆ ಚಾಲನೆ
ನೀಟ್ ವಿವಾದದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎನ್ಟಿಎಯಲ್ಲಿ ಇದೀಗ ಆರಂಭವಾಗಿರುವ ಈ ಬದಲಾವಣೆಗಳು ಸಂಸ್ಥೆ ಸ್ಥಾಪನೆಯಾದ ನಂತರದ ಅತಿದೊಡ್ಡ ಆಡಳಿತಾತ್ಮಕ ಸುಧಾರಣೆ ಎಂದು ಹೇಳಲಾಗುತ್ತಿದೆ. ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆ, ಭದ್ರತೆ ಮತ್ತು ಪವಿತ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…