Latest

ಪಿಡಿಒ ಬಡಿಗೇರ ನಿರ್ಲಕ್ಷ; ಪರದಾಡುತ್ತಿರುವ ಕವಲಗಿ ಗ್ರಾಮದ ಜನರು!

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಅರಶನಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕವಲಗಿ ಗ್ರಾಮದ ಸರ್ಕಾರಿ ಶಾಲೆಯ ಹಿಂದುಗಡೆಯಲ್ಲಿನ ದುಸ್ಥಿತಿ ಇದು. ರಸ್ತೆ ತುಂಬಾ ಹದಗೆಟ್ಟಿದ್ದು, ರಸ್ತೆಯಲ್ಲಿಯೇ ಸಂಪೂರ್ಣ ನೀರು ನಿಂತು ಗಬ್ಬೆದ್ದು ನಾರುತಿದೆ. ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಅದೇ ರಸ್ತೆಯಲ್ಲಿಯೇ ದಿನಾಲೂ ಸೈಕಲ್ ಮೋಟಾರ್ ಗಳಿಂದ ಗ್ರಾಮದ ರೈತರು ಮನೆಗೆ ಹಾಗೂ ಹೊಲಗಳಿಗೆ ಹೋಗಬೇಕು. ರಸ್ತೆಯ ಮೇಲೆ ಇರುವ ಈ ಕೊಳಚೆಯ ಪರಿಸ್ಥಿತಿ ನೋಡಿದರೆ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ಸರಿಯಾಗಿ ಇರದೇ ಇರುವುದು ಕಂಡುಬರುತ್ತದೆ.

ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಪ್ಪ ದೇವೇಂದ್ರಪ್ಪ ಬಡಿಗೇರ ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ವರದಿ ಕಂಡ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಅಥವಾ ಘರ್ಸು(ಮರಂ) ಹಾಕುವ ಮೂಲಕ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬುವುದು ಭ್ರಷ್ಟರ ಬೇಟೆ ಪತ್ರಿಕೆಯ ಆಶಯವಾಗಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

24 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

24 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago