ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಅರಶನಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕವಲಗಿ ಗ್ರಾಮದ ಸರ್ಕಾರಿ ಶಾಲೆಯ ಹಿಂದುಗಡೆಯಲ್ಲಿನ ದುಸ್ಥಿತಿ ಇದು. ರಸ್ತೆ ತುಂಬಾ ಹದಗೆಟ್ಟಿದ್ದು, ರಸ್ತೆಯಲ್ಲಿಯೇ ಸಂಪೂರ್ಣ ನೀರು ನಿಂತು ಗಬ್ಬೆದ್ದು ನಾರುತಿದೆ. ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಅದೇ ರಸ್ತೆಯಲ್ಲಿಯೇ ದಿನಾಲೂ ಸೈಕಲ್ ಮೋಟಾರ್ ಗಳಿಂದ ಗ್ರಾಮದ ರೈತರು ಮನೆಗೆ ಹಾಗೂ ಹೊಲಗಳಿಗೆ ಹೋಗಬೇಕು. ರಸ್ತೆಯ ಮೇಲೆ ಇರುವ ಈ ಕೊಳಚೆಯ ಪರಿಸ್ಥಿತಿ ನೋಡಿದರೆ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ಸರಿಯಾಗಿ ಇರದೇ ಇರುವುದು ಕಂಡುಬರುತ್ತದೆ.
ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಪ್ಪ ದೇವೇಂದ್ರಪ್ಪ ಬಡಿಗೇರ ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ವರದಿ ಕಂಡ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಅಥವಾ ಘರ್ಸು(ಮರಂ) ಹಾಕುವ ಮೂಲಕ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬುವುದು ಭ್ರಷ್ಟರ ಬೇಟೆ ಪತ್ರಿಕೆಯ ಆಶಯವಾಗಿದೆ.
ವರದಿ: ಸಂಗಪ್ಪ ಚಲವಾದಿ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…