ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಅರಶನಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕವಲಗಿ ಗ್ರಾಮದ ಸರ್ಕಾರಿ ಶಾಲೆಯ ಹಿಂದುಗಡೆಯಲ್ಲಿನ ದುಸ್ಥಿತಿ ಇದು. ರಸ್ತೆ ತುಂಬಾ ಹದಗೆಟ್ಟಿದ್ದು, ರಸ್ತೆಯಲ್ಲಿಯೇ ಸಂಪೂರ್ಣ ನೀರು ನಿಂತು ಗಬ್ಬೆದ್ದು ನಾರುತಿದೆ. ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಅದೇ ರಸ್ತೆಯಲ್ಲಿಯೇ ದಿನಾಲೂ ಸೈಕಲ್ ಮೋಟಾರ್ ಗಳಿಂದ ಗ್ರಾಮದ ರೈತರು ಮನೆಗೆ ಹಾಗೂ ಹೊಲಗಳಿಗೆ ಹೋಗಬೇಕು. ರಸ್ತೆಯ ಮೇಲೆ ಇರುವ ಈ ಕೊಳಚೆಯ ಪರಿಸ್ಥಿತಿ ನೋಡಿದರೆ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ಸರಿಯಾಗಿ ಇರದೇ ಇರುವುದು ಕಂಡುಬರುತ್ತದೆ.
ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಪ್ಪ ದೇವೇಂದ್ರಪ್ಪ ಬಡಿಗೇರ ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ಗ್ರಾಮದ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ವರದಿ ಕಂಡ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ರಸ್ತೆಗೆ ಕಾಂಕ್ರೀಟ್ ವ್ಯವಸ್ಥೆ ಅಥವಾ ಘರ್ಸು(ಮರಂ) ಹಾಕುವ ಮೂಲಕ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬುವುದು ಭ್ರಷ್ಟರ ಬೇಟೆ ಪತ್ರಿಕೆಯ ಆಶಯವಾಗಿದೆ.
ವರದಿ: ಸಂಗಪ್ಪ ಚಲವಾದಿ
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…