Latest

Pwd ಇಲಾಖೆಯ ಅಧಿಕಾರಿಗಳ ನಿರ್ಲಕ್ಷ, ಗುಂಡಿ ಬಿದ್ದ ರಸ್ತೆಗಳು!

ಮಂಡ್ಯ ಜಿಲ್ಲಾ, ಕೃಷ್ಣರಾಜಪೇಟೆ ತಾಲೋಕು, ಬೂಕನಕೆರೆ ಹೋಬಳಿಯ ರಸ್ತೆಗಳ ದುಸ್ಥಿತಿ. ಬೂಕನಕೆರೆ ಗ್ರಾಮವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ತವರು ಗ್ರಾಮವಾಗಿದ್ದರು ಸಾಕಷ್ಟು ಮೂಲಭೂತ ಸೌಕರ್ಯ ವಿಲ್ಲದೆ ಸಾಕಷ್ಟು ಸಮಸ್ಯೆಗಳು ತಾಂಡವವಡುತಿದ್ದೆ. ಈ ಗ್ರಾಮವನ್ನು ಅಭಿರುದ್ದಿ ಮಾಡುವೆವೆಂದು ರಾಜಕೀಯ ನಾಯಕರ ಆಶ್ವಾಸನೆಗಳು ಇನ್ನು ಜನರಿಗೆ ಸಿಕ್ಕಿಲ್ಲ!. ಈ ಗ್ರಾಮವು ಹೋಬಳಿಯ ಎಲ್ಲ ರೈತರ, ಕಾರ್ಮಿಕರ ಕೇಂದ್ರವಾಗಿದ್ದರು ಸಹ ಇಲ್ಲಿನ ರಸ್ತೆಗಳು ಹದಗೆಟ್ಟಿದೆ. ಬೂಕನಕೆರೆ ಸರ್ಕಲಿಂದ ಮೈಸೂರಿಗೆ ಹೋಗುವ ರಸ್ತೆಯ ಚಿತ್ರಣಗಳಿವು. ಇದೆ ರಸ್ತೆಯಲ್ಲಿ ಸಾವಿರಾರು ಜನರು, ದೊಡ್ಡ ದೊಡ್ಡ ವಾಹನಗಳು, ಲಾರಿ, ಬಸ್, ಸ್ಕೂಟರ್ ಗಳನ್ನು ದಿನನಿತ್ಯದ ಹೊಡಾಟಕಾಗಿ ಉಪಯೋಗಿಸುತ್ತಾರೆ ಹಾಗು ರೈತರು ದಿನ ನಿತ್ಯ ತಮ್ಮ ಕೆಲಸಕ್ಕಾಗಿ ಎತ್ತಿನ ಬಂಡಿ ಹಸು ಕರುಗಳ ಹೋದಾಟಕ್ಕೆ ಈ ರಸ್ತೆ ಬಳಸುತ್ತಿದಾರೆ. ಈ ರಸ್ತೆಯು ಮೈಸೂರಿಗೆ ಸಂಪರ್ಕ ಕಲ್ಪಿಸಿ ಕೊಡುವ ರಸ್ತೆಯಾಗಿದ್ದರು ಈ ರಸ್ತೆಯ ಅವ್ಯವಸ್ಥೆ ಈ ರೀತಿ ಕಾಣುತಿದೆ. ಈ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳು ಇದ್ದರು ಅವುಗಳ ಮುಚ್ಚುವ ಹೆಸರಲ್ಲಿ ದುಡ್ಡು ಮಾಡಿದ್ದಾರೆ ವಿನಹ ಅವುಗಳನ್ನು ಸರಿ ಪಡಿಸಿಲ್ಲ ಮಳೆಯಾದರೆ ರಸ್ತೆಗಳು ಕೆರೆಯಂತೆ ಕಾಣುತ್ತವೆ ಮಳೆಗಾಲದಲ್ಲಿ ರಸ್ತೆ ಸರಿಯಾಗಿ ಕಾಣದೆ ಜನರು ಬಿದ್ದು ಕೈ ಕಾಲು ಮುರುದುಕೊಂಡಿರುತ್ತಾರೆ ಹಾಗು ಸಾಕಷ್ಟು ವಾಹನಗಳು ಕೆಟ್ಟಿದ್ದು ಉಂಟು. ಇನ್ನಾದರೂ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕೆಂದು ಸಾಕಷ್ಟು ಸಾರ್ವಜನಿಕರು ಕೇಳುತಿದ್ದಾರೆ.
ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago