Latest

ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯ: ಗರ್ಭಿಣಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟು ಜೀವಕ್ಕೆ ಅಪಾಯ!

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣಕ್ಕೆ ಭಯಪಡುವಂತಾಗಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ಅಜಾಗರೂಕತೆಯಿಂದ ಶಸ್ತ್ರಚಿಕಿತ್ಸೆಗೆ ಬಳಸಿದ ವಸ್ತುಗಳನ್ನು ರೋಗಿಯ ದೇಹದಲ್ಲೇ ಉಳಿಯುವಂತಹ ಭಯಾನಕ ಘಟನೆಗಳು ಒಂದರ ಬಳಿಕ ಒಂದರಂತೆ ನಡೆದಿವೆ.

ಇತ್ತೀಚಿನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಶರಣ್ಯ ಲಕ್ಷ್ಮಿ ಹೆರಿಗೆಗಾಗಿ 2024ರ ನವೆಂಬರ್ 27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಸಾಧ್ಯವಾಗದೆ, ವೈದ್ಯರು ಸಿಸೇರಿಯನ್ ಮಾಡಿ ಹೆರಿಗೆ ನಡೆಸಿದರು.

ಆಪರೇಷನ್ ಯಶಸ್ವಿಯಾಗಿ ಮುಗಿದ ಬಳಿಕ, ಡಿಸೆಂಬರ್ 2ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮನೆಗೆ ಮರಳಿದ ಕೆಲ ದಿನಗಳ ನಂತರ, ಶರಣ್ಯ ಲಕ್ಷ್ಮಿ ತೀವ್ರ ಜ್ವರಕ್ಕೆ ಒಳಗಾದರು. ಇದರಿಂದ ಆತಂಕಗೊಂಡ ಅವರ ಕುಟುಂಬಸ್ಥರು ಚಿಕಿತ್ಸೆ ನೀಡಿದ ವೈದ್ಯ ಡಾ. ಅನಿಲ್ ಕುಮಾರ್ ಅವರನ್ನು ಸಂಪರ್ಕಿಸಿದರು. ಆದರೆ ವೈದ್ಯರು ಕೇವಲ ಜ್ವರದ ಔಷಧಿ ನೀಡಿ ನಿರ್ಲಕ್ಷ್ಯ ತೋರಿದರು.

ಜ್ವರ ಮುಂದುವರಿದು, ಶರಣ್ಯ ಲಕ್ಷ್ಮಿ ಎದ್ದು ನಿಲ್ಲಲು ಕೂಡ ಕಷ್ಟ ಅನುಭವಿಸುತ್ತಿದ್ದರು. ಇದರಿಂದ ಬೇರೆ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ ಕುಟುಂಬ ಸದಸ್ಯರು, ಅವರ ಸಲಹೆಯ ಮೇರೆಗೆ ಸಿಟಿ ಸ್ಕ್ಯಾನ್ ಮಾಡಿಸಿದರು. ತಕ್ಷಣವೇ ಶಾಕ್ ಆಗುವಂತಹ ವಿಚಾರ ಬೆಳಕಿಗೆ ಬಂದಿದೆ—ಆಪರೇಷನ್ ವೇಳೆ ಬಳಸಿದ ಶಸ್ತ್ರಚಿಕಿತ್ಸಾ ಬಟ್ಟೆ (ಸರ್ಜಿಕಲ್ ಗೋಜ) ಹೊಟ್ಟೆಯೊಳಗಡೆ ಉಳಿದಿತ್ತು!

ಇದೇ ತಿಳಿಯುತ್ತಿದ್ದಂತೆ, ತಕ್ಷಣವೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿ, ಹೊಟ್ಟೆಯೊಳಗಿದ್ದ ಬಟ್ಟೆಯನ್ನು ಹೊರತೆಗೆದುಕೊಳ್ಳಲಾಯಿತು. ಸದ್ಯ, ಶರಣ್ಯ ಲಕ್ಷ್ಮಿಯ ಪತಿ ಗಗನ್ ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವೈದ್ಯ ಅನಿಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದು ಮೊದಲು ನಡೆದಂತಹ ಘಟನೆಯಲ್ಲ. ಫೆಬ್ರವರಿ 23ರಂದು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಭಾಗ್ಯಶ್ರೀ ಎಂಬ ಮಹಿಳೆಯಿಗೂ ಹಾಗೂ ಫೆಬ್ರವರಿ 19ರಂದು ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದ ಶ್ರುತಿ ರಾಜು ಬಡಿಗೇರ್ ಎಂಬಾಕೆಯಿಗೂ ಇದೇ ರೀತಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಬಟ್ಟೆ, ಕಾಟನ್ ಹೊಟ್ಟೆಯೊಳಗೇ ಉಳಿಯುವ ದೋಷ ಮಾಡಿದ್ದರು.

ಇಂತಹ ನಿರ್ಲಕ್ಷ್ಯದಿಂದ ಜನರ ಜೀವಕ್ಕೆ ತೀವ್ರ ಅಪಾಯ ಉಂಟಾಗುತ್ತಿದೆ. ವೈದ್ಯಕೀಯ ಜಾಗೃತಿಯ ಕೊರತೆ, ಪರಿಣಾಮಕಾರಿಯಲ್ಲದ ಮೇಲ್ವಿಚಾರಣೆಯಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆಯಿಂದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

10 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

10 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

10 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago