Latest

ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯ: ಗರ್ಭಿಣಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟು ಜೀವಕ್ಕೆ ಅಪಾಯ!

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣಕ್ಕೆ ಭಯಪಡುವಂತಾಗಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ಅಜಾಗರೂಕತೆಯಿಂದ ಶಸ್ತ್ರಚಿಕಿತ್ಸೆಗೆ ಬಳಸಿದ ವಸ್ತುಗಳನ್ನು ರೋಗಿಯ ದೇಹದಲ್ಲೇ ಉಳಿಯುವಂತಹ ಭಯಾನಕ ಘಟನೆಗಳು ಒಂದರ ಬಳಿಕ ಒಂದರಂತೆ ನಡೆದಿವೆ.

ಇತ್ತೀಚಿನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಶರಣ್ಯ ಲಕ್ಷ್ಮಿ ಹೆರಿಗೆಗಾಗಿ 2024ರ ನವೆಂಬರ್ 27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಸಾಧ್ಯವಾಗದೆ, ವೈದ್ಯರು ಸಿಸೇರಿಯನ್ ಮಾಡಿ ಹೆರಿಗೆ ನಡೆಸಿದರು.

ಆಪರೇಷನ್ ಯಶಸ್ವಿಯಾಗಿ ಮುಗಿದ ಬಳಿಕ, ಡಿಸೆಂಬರ್ 2ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮನೆಗೆ ಮರಳಿದ ಕೆಲ ದಿನಗಳ ನಂತರ, ಶರಣ್ಯ ಲಕ್ಷ್ಮಿ ತೀವ್ರ ಜ್ವರಕ್ಕೆ ಒಳಗಾದರು. ಇದರಿಂದ ಆತಂಕಗೊಂಡ ಅವರ ಕುಟುಂಬಸ್ಥರು ಚಿಕಿತ್ಸೆ ನೀಡಿದ ವೈದ್ಯ ಡಾ. ಅನಿಲ್ ಕುಮಾರ್ ಅವರನ್ನು ಸಂಪರ್ಕಿಸಿದರು. ಆದರೆ ವೈದ್ಯರು ಕೇವಲ ಜ್ವರದ ಔಷಧಿ ನೀಡಿ ನಿರ್ಲಕ್ಷ್ಯ ತೋರಿದರು.

ಜ್ವರ ಮುಂದುವರಿದು, ಶರಣ್ಯ ಲಕ್ಷ್ಮಿ ಎದ್ದು ನಿಲ್ಲಲು ಕೂಡ ಕಷ್ಟ ಅನುಭವಿಸುತ್ತಿದ್ದರು. ಇದರಿಂದ ಬೇರೆ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ ಕುಟುಂಬ ಸದಸ್ಯರು, ಅವರ ಸಲಹೆಯ ಮೇರೆಗೆ ಸಿಟಿ ಸ್ಕ್ಯಾನ್ ಮಾಡಿಸಿದರು. ತಕ್ಷಣವೇ ಶಾಕ್ ಆಗುವಂತಹ ವಿಚಾರ ಬೆಳಕಿಗೆ ಬಂದಿದೆ—ಆಪರೇಷನ್ ವೇಳೆ ಬಳಸಿದ ಶಸ್ತ್ರಚಿಕಿತ್ಸಾ ಬಟ್ಟೆ (ಸರ್ಜಿಕಲ್ ಗೋಜ) ಹೊಟ್ಟೆಯೊಳಗಡೆ ಉಳಿದಿತ್ತು!

ಇದೇ ತಿಳಿಯುತ್ತಿದ್ದಂತೆ, ತಕ್ಷಣವೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿ, ಹೊಟ್ಟೆಯೊಳಗಿದ್ದ ಬಟ್ಟೆಯನ್ನು ಹೊರತೆಗೆದುಕೊಳ್ಳಲಾಯಿತು. ಸದ್ಯ, ಶರಣ್ಯ ಲಕ್ಷ್ಮಿಯ ಪತಿ ಗಗನ್ ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವೈದ್ಯ ಅನಿಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದು ಮೊದಲು ನಡೆದಂತಹ ಘಟನೆಯಲ್ಲ. ಫೆಬ್ರವರಿ 23ರಂದು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಭಾಗ್ಯಶ್ರೀ ಎಂಬ ಮಹಿಳೆಯಿಗೂ ಹಾಗೂ ಫೆಬ್ರವರಿ 19ರಂದು ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದ ಶ್ರುತಿ ರಾಜು ಬಡಿಗೇರ್ ಎಂಬಾಕೆಯಿಗೂ ಇದೇ ರೀತಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಬಟ್ಟೆ, ಕಾಟನ್ ಹೊಟ್ಟೆಯೊಳಗೇ ಉಳಿಯುವ ದೋಷ ಮಾಡಿದ್ದರು.

ಇಂತಹ ನಿರ್ಲಕ್ಷ್ಯದಿಂದ ಜನರ ಜೀವಕ್ಕೆ ತೀವ್ರ ಅಪಾಯ ಉಂಟಾಗುತ್ತಿದೆ. ವೈದ್ಯಕೀಯ ಜಾಗೃತಿಯ ಕೊರತೆ, ಪರಿಣಾಮಕಾರಿಯಲ್ಲದ ಮೇಲ್ವಿಚಾರಣೆಯಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆಯಿಂದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ.

nazeer ahamad

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

7 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

8 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago