Latest

ಕಾಂಗ್ರೆಸ್ ಮುಖಂಡನ ಗ್ಯಾಂಗ್ ದರೋಡೆ ಪ್ರಕರಣದಲ್ಲಿ ಹೊಸ ಬಂಧನ: ಒಬ್ಬ ಆತ್ಮಹತ್ಯೆಗೆ ಶರಣು

ಕೋಲಾರ್: ಕೆಜಿಎಫ್‌ನಲ್ಲಿ ನಡೆದ 3.5 ಕೆಜಿ ಚಿನ್ನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತೊಂದು ಪ್ರಮುಖ ಬೆಳವಣಿಗೆಯನ್ನು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೊಸ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ತಮಿಳುನಾಡಿನ ಪಿ. ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಹಾಗೂ ವೇಲು ಎಂದು ಗುರುತಿಸಲಾಗಿದೆ. ಇತರ ಆರೋಪಿ ಅಪ್ಪು ಎಂಬಾತ, ತನಿಖೆ ಗಟ್ಟಿಯಾಗುತ್ತಿರುವ ನಡುವೆಯೇ ತಮಿಳುನಾಡಿನ ಕಂಬಟ್ಟುಬಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಏಪ್ರಿಲ್ 2ರಂದು ರಾತ್ರಿ ತಮಿಳುನಾಡಿನಿಂದ ಚಿನ್ನ ಸಾಗಿಸುತ್ತಿದ್ದ ವ್ಯಾಪಾರಿಯ ಕಾರನ್ನು ದರೋಡೆಕೋರರು ಕೋಲಾರ್ ಜಿಲ್ಲೆಯ ಕೆಜಿಎಫ್ ಬಳಿ ಅಡ್ಡಗಟ್ಟಿ, 3.5 ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಈ ವೇಳೆ ಕಾರಿನಲ್ಲಿ ಚಿನ್ನದ ವ್ಯಾಪಾರಿ ಚೇತನ್ ಜೈನ್ ಹಾಗೂ ಇತರರು ಪ್ರಯಾಣಿಸುತ್ತಿದ್ದರು. ಆರೋಪಿಗಳು ಮಾಜಿ ಕಾಂಗ್ರೆಸ್ ಮುಖಂಡನ ನೇತೃತ್ವದ ತಂಡದವರೆಂದು ತಿಳಿದುಬಂದಿದೆ. ಆರೋಪಿಗಳ ಪೈಕಿ ಕೆಲವರು ರಾಜಕೀಯ ಬೆಂಬಲ ಹೊಂದಿದ್ದಾರೆ ಎಂಬ ಶಂಕೆಯಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಿರುವ ಪೊಲೀಸರು, ಮುಂದಿನ ತನಿಖೆಯಲ್ಲಿ ಇನ್ನಷ್ಟು ಭಿತ್ತಿಮಹಿತಿಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ. ಈ ದರೋಡೆ ಪ್ರಕರಣ ರಾಜಕೀಯ ಸಂಬಂಧಗಳನ್ನು ಹೊಂದಿರುವ ಅನುಮಾನದಿಂದ ಮಹತ್ವ ಪಡೆದುಕೊಂಡಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago